ನವದೆಹಲಿ: ರಾಹುಲ್ ಗಾಂಧಿಯವರು ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಮತ್ತು ಅಸತ್ಯ ಎಂದು ಕರೆದಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಆರೋಪಿಸಿದ್ದಾರೆ. ಸಂಸತ್ನ ಲೈಬ್ರರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಇಡೀ ಹಿಂದೂ ಸಮಾಜವನ್ನು ಅವಮಾನಿಸಿದ್ದಾರೆ.
ಇದು ಇದೇ ಮೊದಲಲ್ಲ, ಇದು ಕಾಂಗ್ರೆಸ್ನ ಹಳೆಯ ಚಾಳಿಯಾಗಿದೆ. 2010ರಲ್ಲಿ ಅಂದಿನ ಗೃಹ ಸಚಿವ ಪಿ.ಚಿದಂಬರಂ ಅವರು ಕೂಡ ಹಿಂದೂಗಳನ್ನು ಭಯೋತ್ಪಾದಕರು ಎಂದು ಕರೆದಿದ್ದರು. ಈಗ ಹಿಂದೂಗಳನ್ನು ಹಿಂಸಾತ್ಮಕ ಮತ್ತು ಸುಳ್ಳುಗಾರರು ಎಂದು ಕರೆಯುವ ಮೂಲಕ ರಾಹುಲ್ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ತಗ್ಗಿಸಿದ್ದಾರೆ ಎಂದು ದೂರಿದ್ದಾರೆ.
ಚೆನ್ನೈನ ಐಫೋನ್ ಫ್ಯಾಕ್ಟರಿಯಲ್ಲಿ ವಿವಾಹಿತರಿಗೆ ನೋ ಎಂಟ್ರಿ..! ಏನಿದು ವಿವಾದ?
ಸಂಸತ್ತಿನ ಚರ್ಚೆಯ ಸಮಯದಲ್ಲಿ ದೇವರ ಚಿತ್ರಗಳನ್ನು ತೋರಿಸಿ ರಾಜಕೀಯವನ್ನು ಸೇರಿಸುವುದು ವಿರೋಧ ಪಕ್ಷದ ನಾಯಕನಿಗೆ ಯಾವುದೇ ರೀತಿಯಲ್ಲಿ ಸರಿಹೊಂದುವುದಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನವು ಅತ್ಯಂತ ಜವಾಬ್ದಾರಿಯುತ ಸ್ಥಾನವಾಗಿದೆ. ಮೊದಲ ಬಾರಿಗೆ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಆದರೆ ಅವರು ಮೊದಲ ಬಾರಿಗೆ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.