ರಾಯಚೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ಡಿ.1 ರಿಂದ 23ರ ವರೆಗೆ ನಡೆಯಲಿರುವ ಅಂಡರ್-16 ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ 2022-23ರ (VIjay Merchant Trophy) ಉಪನಾಯಕನಾಗಿ ರಾಯಚೂರಿನ (Raichur) ಯುವಕ ಅನಿಕೇತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಈ ತಂಡಕ್ಕೆ ನಾಯಕನಾಗಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಆಯ್ಕೆಯಾಗಿದ್ದಾರೆ.
ಅನಿಕೇತ್ ರೆಡ್ಡಿಯವರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವಿಕ್ರಂ ಸಿಂಹರೆಡ್ಡಿ ಅವರ ಪುತ್ರರಾಗಿದ್ದಾರೆ. ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗಳಿಗೆ ಆಯ್ಕೆಯಾಗಿರುವುದಕ್ಕೆ ಕುಟುಂಬಸ್ಥರು ಹಾಗೂ ಜಿಲ್ಲೆಯ ಕ್ರೀಡಾಪಟುಗಳು ಸಂತಸ ವ್ಯಕ್ತಪಡಿಸಿದ್ದಾರೆ
![Demo](https://ainlivenews.com/wp-content/uploads/2023/12/spoorthi-1.jpg)
ಅನಿಕೇತ್ ರೆಡ್ಡಿ ಎಲ್ಲಾ ಟೂರ್ನಮೆಂಟ್ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದರಿಂದಾಗಿ ಅವರು ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಲಿ ಎಂದು ಸ್ಥಳೀಯ ತರಬೇತಿದಾರರು ಹಾಗೂ ಆಟಗಾರರು ಶುಭಕೋರಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)