ಜೈಪುರ:- ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದಾಗಿ ಜೈಪುರದ ಮನೆಯೊಂದರ ನೆಲಮಾಳಿಗೆಯು ಇಂದು ಜಲಾವೃತಗೊಂಡಿದ್ದು, 3 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ ಹಾಗೂ ಮಳೆಯ ಪರಿಣಾಮವಾಗಿ ನಾಲ್ವರು ನಾಪತ್ತೆಯಾಗಿದ್ದಾರೆ.
ಬಿಜೆಪಿ ಜತೆ ಪಾದಯಾತ್ರೆ ಮಾಡಲು ಹೆಚ್ ಡಿ ಕುಮಾರಸ್ವಾಮಿ ಷರತ್ತು!, ಏನದು ಗೊತ್ತಾ!?
ರಕ್ಷಣಾ ಕಾರ್ಯಾಚರಣೆ ಆರಂಭವಾದ ಏಳು ಗಂಟೆಗಳ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಯಿತು. ಜೈಪುರದಲ್ಲಿ ಮಳೆಯಿಂದಾಗಿ ನೆಲಮಾಳಿಗೆಯು ಜಲಾವೃತವಾಗಿತ್ತು. ಸಂತ್ರಸ್ತರು ಸಕಾಲದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ದುರಂತವಾಗಿ ಮಳೆಯ ನೀರಿನಲ್ಲಿ ಮುಳುಗಿದ್ದಾರೆ.
ಮನೆಯ ನೆಲಮಾಳಿಗೆಯಲ್ಲಿ ನೀರು ತುಂಬಿ ಮೃತಪಟ್ಟವರನ್ನು ಪೂರ್ವಿ (3), ಪೂಜಾ (19), ಮತ್ತು ಕಮಲ್ (24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಮಲ ಮತ್ತು ಪೂಜಾ ದಿನಗೂಲಿ ಕಾರ್ಮಿಕರಾಗಿದ್ದು, ನಗರದ ವಿಶ್ವಕರ್ಮ ಪ್ರದೇಶದಲ್ಲಿ ವಾಸವಾಗಿದ್ದರು. ಜೈಪುರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅಧಿಕಾರಿಗಳು ಎಲ್ಲಾ ಶಾಲೆಗಳು ಮತ್ತು ಹಲವಾರು ಕಚೇರಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಜಾಮ್ಡೋಲಿ ಪ್ರದೇಶದಲ್ಲಿ ರಸ್ತೆಯೊಂದರಲ್ಲಿ ಗುಂಡಿ ಬಿದ್ದಿದೆ. ಅದರ ನಂತರ ಶಾಲಾ ಬಸ್, ಟ್ಯಾಕ್ಸಿ ಮತ್ತು ಬುಲ್ಡೋಜರ್ ಅಲ್ಲಿ ಸಿಲುಕಿಕೊಂಡವು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜೈಪುರದ ಮಹಾರಾಣಿ ಫಾರ್ಮ್ ಪ್ರದೇಶದ ಬಳಿ ಪ್ರವಾಹಕ್ಕೆ ಸಿಲುಕಿದ ದ್ರವಾವತಿ ನದಿಯಲ್ಲಿ ಕಾರೊಂದು ಕೊಚ್ಚಿ ಹೋಗಿದೆ. ಚಾಲಕ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ