ಬೆಂಗಳೂರು:- ರಾಜ್ಯದಲ್ಲಿ ಮುಂದಿನ ತಿಂಗಳು ಮಳೆ ನಿರೀಕ್ಷೆ ಇದ್ದು, ಸಧ್ಯ ತಾಪಮಾನ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಹೇಳಿದೆ
‘ಪೆನ್ಡ್ರೈವ್’ ಸುಳಿಯಲ್ಲಿ ಪ್ರಜ್ವಲ್ ರೇವಣ್ಣ.. ಟ್ವೀಟ್ ಮಾಡಿ ಮತ್ತೊಂದು ಶಾಕ್ ಕೊಟ್ಟ ಸಿದ್ದು..!
ರಾಯಚೂರು, ಚಿತ್ರದುರ್ಗ, ವಿಜಯಪುರ, ಹಾಸನ, ದಾವಣಗೆರೆ, ಬೀದರ್, ಬೆಳಗಾವಿ, ಬಳ್ಳಾರಿ, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಮೇ ನಲ್ಲಿ ಮಳೆಯಾಗಬಹುದು ಎಂದು ಸೂಚನೆ ಸಿಕ್ಕಿದೆ. ಗದಗ, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಬೀದರ್, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಮೈಸೂರು, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಿದೆ
ಕಲಬುರ್ಗಿ, ರಾಯಚೂರು, ಬಾಗಲಕೋಟೆಯಲ್ಲಿ 42 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಒಣ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಹೇಳಿದ್ದಾರೆ. ಅಲ್ಲದೇ ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ವಾನಿರ್ಂಗ್ ನೀಡಲಾಗಿದೆ.ಮುಖ್ಯವಾಗಿ ಬೀದರ್, ಕಲ್ಬುರ್ಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳಲ್ಲಿ ಹೀಟ್ ವೇವ್ ಇರಲಿದೆ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ 36-37 ತಾಪಮಾನ ಕಂಡು ಬಂದಿದೆ. ನಿನ್ನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38 ಡಿಗ್ರಿ ತಾಪಮಾನ ಕಂಡು ಬಂದಿದೆ.