ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅದರಂತೆ ನಾಳೆಯೂ ರಜೆ ಇರುತ್ತಾ ಎಂಬ ಗೊಂದಲ ಇದೆ.
ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್ 23 ರವರಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅಷ್ಟೆ ಅಲ್ಲದೆ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲೂ ಅ.23 ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ.
ಉತ್ತರಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಗದಗ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಕೋಲಾರ, ರಾಮನಗರದ ಹಲವು ಕಡೆ ಅಕ್ಟೋಬರ್ 23 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆ 16 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ .ಪಾಟೀಲ್ ಹೇಳಿಕೆ ನೀಡಿದ್ದಾರೆ.
ಅ.20ರ ರಾತ್ರಿಯಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಅ.21ರಂದು ಭರ್ಜರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಪ್ರಕಟಿಸಿದ್ದರು. ಇದೀಗ ನಾಳೆ ಅಂದರೆ ಅ.22 ರಂದೂ ರಜೆ ಇರಬಹುದಾ ಎಂದು ಕೇಳತೊಡಗಿದ್ದಾರೆ.
ಇನ್ನು ಬೆಳಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ ಸಂಜೆಯವರೆಗೆ ಮಳೆ ಪರಿಸ್ಥಿತಿ ನೋಡಿಕೊಂಡು ನಾಳೆ ರಜೆ ಕೊಡಬೇಕೋ, ಬೇಡವೋ ಎಂದು ನಿರ್ಧರಿಸಲಾಗುತ್ತೆ ಎಂದು ಹೇಳಿದ್ದರು.
ಆದ್ದರಿಂದ ನಾಳೆ ಶಾಲೆಗಳಿಗೆ ಬೆಂಗಳೂರಿನಲ್ಲಿ ರಜೆ ಇದೆಯಾ? ಇಲ್ಲವೇ? ಎಂಬುದನ್ನು ಕಾದು ನೋಡಬೇಕಾಗಿದೆ