ಹುಬ್ಬಳ್ಳಿ: ಬಿಜೆಪಿಯವರು ರಾಜಭವನವನ್ನು ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಂತೆ ಕಾಣಿಸುತ್ತಿದೆ. ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ರಾಜ್ಯಪಾಲರಿಗೆ ನೀಡುತ್ತಿರುವುದು ಗಮನಿಸಿದರೆ, ರಾಜ್ಯಪಾಲರ ಕಚೇರಿ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಯ್ತಾ? ಎಂಬ ಅನುಮಾನ ಮೂಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರು ಸಹ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.
ಮುಡಾ ಹಗರಣದಲ್ಲಿ ಕಾಂಗ್ರೆಸ್’ನವರ ಕೈವಾಡ ಎಂಬ ಬಿಜೆಪಿಯವರ ಆರೋಪಕ್ಕೆ ತಿರುಗೇಟು ನೀಡಿದ ಶರತ್ ಬಚ್ಚೆಗೌಡ ಇದು ಶುದ್ದ ಸುಳ್ಳು, ಬೆಂಬಲಕ್ಕೆ ಎಲ್ಲ ಶಾಸಕರು ಹಾಗೂ ಹೈಕಮಾಂಡ್ ಇದೆ. ಅಷ್ಟೇ ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಿದ್ದರೂ ಸಹ ಹಿಂದೂಳಿದ ನಾಯಕನಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
ಇದೀಗ ರಾಜ್ಯಪಾಲರ ಕಚೇರಿ ಹಾಗೂ ಬಿಜೆಪಿ ಕಚೇರಿಗೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ. ಬಿಜೆಪಿ ಪಾದಯಾತ್ರೆಗಿಂತಲೂ ಕಾಂಗ್ರೆಸ್ ಜನಾಂದೋಲನಕ್ಕೆ ಜನರು ಹೆಚ್ಚಿನ ಬೆಂಬಲ ನೀಡಿದ್ದಾರೆ. ಆದರೆ ಬಿಜೆಪಿಯವರು ಹಸಿಸುಳ್ಳು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಸಂಗವೇ ಬರುವುದಿಲ್ಲ ಎಂದು ಹೇಳಿದರು.
ನಟ ದರ್ಶನ್ಗೆ ಜೈಲಿನಲ್ಲಿ VIP ಟ್ರಿಟಮೆಂಟ್; ಶಾಸಕ ಬಚ್ಚೇಗೌಡ ಖಂಡಿನಿಯ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ಗೆ ಜೈಲಿನಲ್ಲಿ ವಿಐಪಿ ಟ್ರಿಟಮೆಂಟ್ ಕೊಟ್ಟಿರೋದು ಖಂಡನಿಯ, ಅವರು ಯಾರೇ ಇರಲಿ ಆರೋಪಿ ಆರೋಪಿನೆ, ಅವರಿಗೆ ಜೈಲಿನಲ್ಲಿ ಟೀ, ಮತ್ತು ಶಿಗರೇಟ್ ವ್ಯವಸ್ಥೆ ಮಾಡಿರೋದು ತಪ್ಪು, ದರ್ಶನ ಒಂದೇ ಪ್ರಕರಣದಲ್ಲಿ ಅಲ್ಲಾ, ಜೈಲಿನಲ್ಲಿ ಎಲ್ಲ ವ್ಯವಸ್ಥೆ ಸರಿಯಾಗಬೇಕಿದೆಂದು ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಹೇಳಿದರು