ರಾಯಚೂರು: ತೀವ್ರ ಪೈಪೋಟಿ ನಡುವೆ ರಾಯಚೂರು ಲೋಕಸಭಾ ಬಿಜೆಪಿ ಟಿಕೆಟ್ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್ಗೆ ಒಲಿದಿದೆ. ಬಿಜೆಪಿ ಟಿಕೆಟ್ಗಾಗಿ ಮಾಜಿ ಸಂಸದ ಬಿ.ವಿ.ನಾಯಕ್, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಹಾಗೂ ರಾಜಾ ಅಮರೇಶ್ವರ ನಾಯಕ್ ನಡುವೆ ತೀವ್ರ ಪೈಪೋಟಿ ಏರ್ಪಟಿತ್ತು. ಬಿಜೆಪಿ ಹೈಕಮಾಂಡ್ ಕೊನೆಗೆ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್ಗೆ ಟಿಕೆಟ್ ಘೋಷಿಸಿದೆ.
ಲಿಂಗಸುಗೂರಿನ ಗುಂತಗೋಳ ಸಂಸ್ಥಾನದ ರಾಜ ಮನೆತನದವರಾದ ರಾಜಾ ಅಮರೇಶ್ವರ ನಾಯಕ್ BA, LLB ಪದವೀಧರರಾಗಿದ್ದಾರೆ. ಎರಡು ಬಾರಿ ಶಾಸಕರಾಗಿದ್ದು, ಎರಡು ಬಾರಿಯೂ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. 1989ರಲ್ಲಿ ಬಂಗಾರಪ್ಪ ಸಿಎಂ ಆಗಿದ್ದ ವೇಳೆ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದು ಧಾರ್ಮಿಕ ದತ್ತಿ ಸಚಿವರಾಗಿದ್ದರು.
Holi festival: ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ, ಇತಿಹಾಸ ನಿಮಗೆ ಗೊತ್ತಾ..?
1999 ರಲ್ಲಿ ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಕಲ್ಮಲಾ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬಂದಿಖಾನೆ ರಾಜ್ಯ ಸಚಿವರಾಗಿದ್ದರು. 2019ರಲ್ಲಿ ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಬಿವಿ ನಾಯಕ್ ವಿರುದ್ಧ ಜಯಗಳಿಸಿದ್ದರು. 1993ರಲ್ಲಿ ರಾಜ್ಯ ವಿಧಾನಸಭೆಯ ಎಸ್ಸಿ, ಎಸ್ಟಿ ಶಾಸಕಾಂಗ ಸಮಿತಿ ಅಧ್ಯಕ್ಷರಾಗಿದ್ದರು. 1999ರಲ್ಲಿ ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಅಮರೇಶ್ವರ ನಾಯಕ್ ಕಾರ್ಯನಿರ್ವಹಿಸಿದ್ದಾರೆ.