ಜೈಪುರ:– ರಾಜಸ್ಥಾನದ ಉತ್ತರ ಪ್ರದೇಶ ಮಾರ್ಗದಲ್ಲಿ ಭರತ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದು, 12 ಜನರ ಸ್ಥಿತಿ ಗಂಭೀರವಾಗಿದೆ
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ.. ಮುಂದಿನ 5 ವರ್ಷದಲ್ಲಿ ಸಿಲಿಕಾನ್ ಸಿಟಿ ವಾಸಕ್ಕೆ ಯೋಗ್ಯವಲ್ಲದ ನಗರ ಆಗುತ್ತೆ..!
ಚಾಲಕನ ತಪ್ಪಿನಿಂದಾಗಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಮಧ್ಯಾಹ್ನ ರಾಜಸ್ಥಾನದ ಭರತ್ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರ ದಾರುಣ ಸಾವಿಗೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟ್ರಕ್ ಎರಡೂ ಜೈಪುರದಿಂದ ಆಗ್ರಾಕ್ಕೆ ಹೋಗುತ್ತಿದ್ದವು. ಅಷ್ಟರಲ್ಲಿ ಹಿಂದಿನಿಂದ ಟ್ರಕ್ಗೆ ಬಸ್ ಡಿಕ್ಕಿ ಹೊಡೆದಿದೆ. ಅಲಿಗಢದಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಹಲೈನಾ ಮಹುವಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ ಚಾಲಕನ ತಪ್ಪಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು 12 ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.