ಬೆಂಗಳೂರು: ಕಾಂಗ್ರೆಸ್ನ (Congress) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಬುಧವಾರ ನಾಮಪತ್ರ ಸಲ್ಲಿಸಿದರು . ಇದರ ಬೆನ್ನಲ್ಲೇ ಕಾಂಗ್ರೆಸ್ ಕರ್ನಾಟಕದಿಂದ ಮೂವರ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಸೈಯ್ಯದ್ ನಾಸೀರ್ ಹುಸೇನ್, ಜಿ.ಸಿ ಚಂದ್ರಶೇಖರ್ ಹಾಗೂ ಅಜಯ್ ಮಾಕನ್ಗೆ ಈ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಬಿಜೆಪಿ ರಾಜ್ಯಸಭೆ ಎಲೆಕ್ಷನ್ಗೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಸದ್ಯ ಕಾಂಗ್ರೆಸ್ ಕೂಡ ಮೂವರ ಹೆಸರುಗಳನ್ನು ಅನೌನ್ಸ್ ಮಾಡಿದೆ.