ಅಯೋಧ್ಯೆ: 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ(Ayodhya) ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ ನಡೆಯಿತು. ಭಗವಾನ್ ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು.
ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.
ಸಂಭ್ರಮದ ಹಬ್ಬಕ್ಕೆ ಮಂದಿರದ ಆಡಳಿತ ಮಂಡಳಿ ಈಗಾಗಲೇ ಸಕಲ ಸಿದ್ಧತೆ ಮಾಡಿದೆ. ಹಬ್ಬದ ದಿನದಂದು ರಾಮನಿಗೆ ಉಣಬಡಿಸಲು 56 ಬಗೆಯ ಭೋಗ್ ಪ್ರಸಾದಗಳನ್ನು ಸಿದ್ಧಪಡಿಸಲಾಗಿದೆ. ಇದರ ಜೊತೆಗೆ ದೇವ್ರ ಹಂಸ್ ಟ್ರಸ್ಟ್ ನಿಂದ ಈಗಾಗಲೇ 1,11,111 ಕೆ.ಜಿ ಲಡ್ಡು ಪ್ರಸಾದವನ್ನು ಅಯೋಧ್ಯೆಗೆ ನೀಡಲಾಗಿದ್ದು, ದೇಗುಲಕ್ಕೆ ಬರುವ ಭಕ್ತರಿಗೆ ವಿತರಿಸಲಾಗುತ್ತದೆ.