ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe Blast) ಸ್ಫೋಟದ ಶಂಕಿತ ಉಗ್ರ ಬಳ್ಳಾರಿಯಲ್ಲೇ (Ballari) ತಲೆಮರೆಸಿಕೊಂಡಿದ್ದಾನಾ ಎಂಬ ಪ್ರಶ್ನೆ ಎದ್ದಿದೆ.
ಬೆಂಗಳೂರಿನಿಂದ (Bengalruu) ಬಸ್ಸು ಹತ್ತಿ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಬಾಂಬರ್ ನಿಂತುಕೊಂಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ (CCTV) ಸೆರೆಯಾಗಿದೆ. ಬಳ್ಳಾರಿಯ ನಂತರ ಆತ ಬೀದರ್, ಭಟ್ಕಳಕ್ಕೆ ತೆರಳಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಬಳ್ಳಾರಿಯ ನಂತರ ಆತ ಎಲ್ಲಿ ಹೋಗಿದ್ದಾನೆ ಎಂಬುದರ ಸುಳಿವು ಇನ್ನೂ ಸಿಕ್ಕಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳ (NIA) ಎನ್ಐಎ ಅಧಿಕಾರಿಗಳು ಈಗ ಬಳ್ಳಾರಿಯಲ್ಲೇ ಬೀಡು ಬಿಟ್ಟು ತನಿಖೆ ತೀವ್ರಗೊಳಿಸಿದ್ದಾರೆ.
Bigg Breaking: ಪ್ರತಾಪ್ ಸಿಂಹಾಗೆ ಟಿಕೆಟ್ ಕೈ ತಪ್ಪು ಸಾಧ್ಯತೆ: ಮೈಸೂರಿನಿಂದ ಯದುವೀರ್ ಒಡೆಯರ್ ಸ್ಫರ್ಧೆ?
ಸಾಧಾರಣವಾಗಿ ದಾಳಿ ಮಾಡಿದ ನಂತರ ಎನ್ಐಎ ಅಧಿಕಾರಿಗಳು ದಾಖಲೆಗಳೊಂದಿಗೆ ತೆರಳುತ್ತಾರೆ ಅಥವಾ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೆ. ಆದರೆ ಕಳೆದ ಮೂರು ದಿನಗಳಿಂದ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲೇ ಬೀಡು ಬಿಟ್ಟು ಶಂಕಿತ ಉಗ್ರನಿಗೆ ಶೋಧ ನಡೆಸುತ್ತಿದ್ದಾರೆ.