ಬೆಂಗಳೂರು:– ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೊಂದು ಸುಧಾರಿತ ಸ್ಪೋಟ ಪ್ರಕರಣವಾಗಿದೆ. ಇಂತಹ ಘಟನೆಗಳು ನಡೆಯಬಾರದು, ತನಿಖೆ ನಡೆಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ರಿಂದ ಮಾಹಿತಿ ಪಡೆದಿದ್ದೇನೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಸದ್ಯ ಸಿಸಿಟಿವಿ ಪರಿಶೀಲನೆ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಟೆರರಿಸ್ಟ್ ಮಾಡಿರುವ ಬಗ್ಗೆ ಇನ್ನು ಗೊತ್ತಿಲ್ಲ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟಕ ಭಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದದ್ದರೂ ಅದು ಪರಿಣಾಮಕಾರಿಯಾಗಿದೆ ಎಂದಿದ್ದಾರೆ.
ಎಲ್ಲರ ಕಾಲದಲ್ಲೂ ಕೂಡ ಘಟನೆಗಳು ನಡೆದಿವೆ ಆದರೆ ಇಂತಹ ಘಟನೆ ನಡೆಯಬಾರದು. ಇತ್ತೀಚೆಗೆ ಇಂತಹ ಘಟನೆ ನಡೆದಿರಲಿಲ್ಲ. ಮಂಗಳೂರಲ್ಲಿ ಘಟನೆ ನಡೆದಿತ್ತು. ಹಿಂದಿನ ಸರ್ಕಾರದಲ್ಲಿ ಹಲವು ಸ್ಫೋಟಗಳು ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈವಾಗ ಈ ಘಟನೆ ನಡೆದಿದೆ. ಆರೋಪಿಗಳನ್ನ ಪತ್ತೆ ಹಚ್ಚಿ ಶಿಕ್ಷಿಸಲಾಗುವುದು. ಬ್ಲಾಸ್ಟ್ ಆಗಿರುವುದು ಸತ್ಯವಾಗಿದೆ. ಬ್ಲಾಸ್ಟ್ ಮಾಡಿರುವವರ ವಿರುದ್ಧ ಶಿಸ್ತಿನ, ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)