ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಹಿನ್ನೆಲೆ ರಾಜ್ಯಾದ್ಯಂತ ರೈಲ್ವೆ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. RPF ನೊಂದಿಗೆ ರಾಜ್ಯ ರೈಲ್ವೆ ಪೊಲೀಸರೊಂದಿಗೆ ಸೇರಿ ಬಿಗಿ ಭದ್ರತೆ ಒದಗಿಸಲಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಶ್ವಾನದಳದ ಮೂಲಕ ಎಲ್ಲ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕರ ತಪಾಸಣೆ ಹಾಗೂ ಬ್ಯಾಗ್ ಗಳ ಪರಿಶೀಲನೆ ಮಾಡಲಾಗುತ್ತಿದೆ. ರೈಲ್ ನ ಎಲ್ಲ ಬೋಗಿಗಳಲ್ಲೂ ಕೂಡ ಪೊಲೀಸರ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)