ನವದೆಹಲಿ:- ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಕ್ಷಣವಾಗಿಗೆ ಎಂದು ದ್ರೌಪದಿ ಮುರ್ಮು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಭವಿಷ್ಯದ ಇತಿಹಾಸಕಾರರು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈಗ ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ. ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ಅಗಾಧ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ಪೂರಿ ಜೀ ಅವರ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಅವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.