ಬೆಂಗಳೂರು: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ (Ram lalla) ಪ್ರಾಣಪ್ರತಿಷ್ಠೆ ನೆರವೇರಲಿದೆ
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮನೆಯಲ್ಲಿ ಶ್ರೀ ರಾಮನಿಗೆ ವಿಶೇಷ ಪೂಜೆ ಮಾಡಿದ್ದಾರೆ.
ಬೆಂಗಳೂರಿನ ಆರ್. ಟಿ. ನಗರದ ತಮ್ಮ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪತ್ನಿ ಚನ್ನಮ್ಮ, ಮಗ ಭರತ್ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು.