ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಏಪ್ರಿಲ್ 6 ರಂದು ರಾಜಸ್ಥಾನ್ ರಾಯಲ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್ಸಿಬಿ ಕೇವಲ ಒಂದು ಪಂದ್ಯದಲ್ಲಿ ಸೋತಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋತಿದೆ. ಆ ಮೂಲಕ ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ಕಿಂಗ್ಸ್ ಎದುರು 4 ವಿಕೆಟ್ಗಳಿಂದ ಗೆದ್ದಿದ್ದ ಆರ್ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ಎದುರಿನ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ
![Demo](https://ainlivenews.com/wp-content/uploads/2023/12/spoorthi-1.jpg)
ರಾಜಸ್ಥಾನ್ ರಾಯಲ್ಸ್ ಎದುರು ತನ್ನ ಮುಂದಿನ ಪಂದ್ಯದಲ್ಲಿ ಆರ್ಸಿಬಿ ಗೆಲುವಿನ ಲಯಕ್ಕೆ ಮರಳಬೇಕೆಂದರೆ ತನ್ನ ಪ್ಲೇಯಿಂಗ್ XIನಲ್ಲಿ ಮಹತ್ವದ ಬದಲಾವಣೆಯನ್ನು ತರಬೇಕಾದ ಅಗತ್ಯವಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ವೈಫಲ್ಯ ಅನುಭವಿಸಿರುವ ಆಟಗಾರರನ್ನು ಕೈ ಬಿಟ್ಟು ಬೇರೆ ಆಟಗಾರರಿಗೆ ಅವಕಾಶವನ್ನು ನೀಡಬೇಕಾದ ಅಗತ್ಯವಿದೆ.
ಆರ್ಸಿಬಿ ತನ್ನ ಆರಂಭಿಕ ಸ್ಥಾನಕ್ಕೆ ಫಾಫ್ ಡು ಪ್ಲೆಸಿಸ್ ಜೊತೆ ಇನಿಂಗ್ಸ್ ಆರಂಭಿಸಲು ಕಳೆದ ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ವಿಲ್ ಜ್ಯಾಕ್ಸ್ಗೆ ಅವಕಾಶ ನೀಡಬೇಕಾದ ಅಗತ್ಯವಿದೆ. ಆ ಮೂಲಕ ಕಳೆದ ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕಕ್ಕೆ ಮರಳಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಆಡಬೇಕು. ಇವರಿಂದ ಇನ್ನೂ ಬ್ಯಾಟಿಂಗ್ನಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲವಾದರೂ ಬೌಲಿಂಗ್ನಲ್ಲಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡಿದ್ದಾರೆ.
ಇನ್ನು ಐದನೇ ಕ್ರಮಾಂಕದಲ್ಲಿ ಅನುಜ್ ರಾವತ್ ಅವರ ಬದಲಿಗೆ ಸುಯೇಷ್ ಪ್ರಭುದೇಸಾಯಿಗೆ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ನೀಡಬೇಕಾಗಿದೆ. ಆ ಮೂಲಕ ದಿನೇಶ್ ಕಾರ್ತಿಕ್ ಅವರು ಮುಂದಿನ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಬೇಕಾದ ಅಗತ್ಯವಿದೆ. ನಂತರ ಏಳನೇ ಕ್ರಮಾಂಕದಲ್ಲಿ ಮ್ಯಾಚ್ ಫಿನಿಷರ್ ಆಗಿ ಮಹಿಪಾಲ್ ಲೊಮ್ರೊರ್ಗೆ ಅವಕಾಶ ಕಲ್ಪಿಸುವ ಮೂಲಕ ಮಯಾಂಕ್ ದಾಗರ್ ಅವರನ್ನು ಕೈ ಬಿಡಬೇಕಾಗಿದೆ.
ಇನ್ನು ಆರ್ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಮೂರು ಬದಲಾವಣೆ ಅಗತ್ಯವಿದೆ. ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡು ಲಾಕಿ ಫರ್ಗ್ಯೂಸನ್ ಹಾಗೂ ಕನ್ನಡಿದ ವೈಶಾಖ್ ವಿಜಯ್ಕುಮಾರ್ಗೆ ಅವಕಾಶ ನೀಡಬೇಕಿದೆ. ಲಾಕಿ ಫರ್ಗ್ಯೂಸನ್ 150ಕ್ಕೂ ಹೆಚ್ಚಿನ ಕಿ.ಮೀ ವೇಗದಲ್ಲಿ ಬೌಲ್ ಮಾಡಲಿದ್ದಾರೆ. ವೈಶಾಖ್, ಕೆಕೆಆರ್ ಎದುರಿನ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಇನ್ನು ಏಕೈಕ ಸ್ಪಿನ್ನರ್ ಆಗಿ ಕರಣ್ ಶರ್ಮಾಗೆ ಅವಕಾಶ ನೀಡಬೇಕು.
![](https://ainlivenews.com/wp-content/uploads/2024/01/Ad-Banner-copy-scaled.jpg)