ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಗೆಲುವಿನ ನಗೆ ಬೀರಲು RCB ಯ ಸ್ಟಾರ್ ಬೌಲರ್ ಕಾರಣ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
Virat Kohli: ಪಾಕ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕಳಪೆ ಬ್ಯಾಟಿಂಗ್… ಅನುಷ್ಕಾ ಶರ್ಮಾ ರಿಯಾಕ್ಷನ್ ಹೀಗಿತ್ತು!
ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.
ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್ಗೆ ವಿಕೆಟ್ ಒಪ್ಪಿಸಿದರು.
ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್ಗಳು ಮೂಡಿಬಂದಿತ್ತು.
7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್ಗಳೊಂದಿಗೆ ಭಾರತ ತಂಡವು 119 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್ನಲ್ಲಿ 18 ರನ್ಗಳ ಅವಶ್ಯಕತೆಯಿತ್ತು. ಅಂತಿಮ ಓವರ್ನಲ್ಲಿ ಅರ್ಷದೀಪ್ ಸಿಂಗ್ 11 ರನ್ ನೀಡಿದರೂ, ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿತು.
ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್ಗಳಿಂದ ಭಾರತ ತಂಡವು 6 ರನ್ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿ RCB ಆಟಗಾರನನ್ನು ಫ್ಯಾನ್ಸ್ ಹೊಗಳುತ್ತಿದ್ದಾರೆ.