ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿದೆ.
Bigg Breaking News: ಮಾಜಿ ಸಚಿವ ಹೆಚ್ ಡಿ ರೇವಣ್ಣ ಅರೆಸ್ಟ್..!
ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 9 ವಿಕೆಟ್ಗಳಿಂದ ಸೋಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಗುಜರಾತ್ ಇದೆ. ಇತ್ತ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವುದರೊಂದಿಗೆ ಪ್ಲೇ ಆಫ್ಗೆ ಹತ್ತಿರವಾಗುವ ಗುರಿಯೊಂದಿಗೆ ಆರ್ಸಿಬಿ ಕಣಕ್ಕಿಳಿಯುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಇಂದಿನ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಈ ಹಿಂದೆ ಅಹಮದಾಬಾದ್ನಲ್ಲಿ ಆಡಿದ ತಂಡವೇ ಇಂದು ಸಹ ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಿದೆ. ಆದರೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಮಾತ್ರ ಎರಡು ಬದಲಾವಣೆಗಳನ್ನು ಮಾಡಿಕೊಂಡು ಅಖಾಡಕ್ಕಿಳಿಯುತ್ತಿದೆ.