ಬೆಂಗಳೂರು: ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ, ಬಿಜೆಪಿ ಸೇರಿದ ಬಳಿಕ ಮಂಡ್ಯದಿಂದ ಸುಮಲತಾ ದೂರ ಉಳಿದಿರುವುದು ಅನುಮಾಣಕ್ಕೆ ಕಾರಣವಾಗಿದೆ. ಪ್ರಚಾರಕ್ಕಾಗಿ ಮಂಡ್ಯಕ್ಕೆ ಈವರೆಗೂ ಸುಮಲತಾ ಬರಲಿಲ್ಲ, ಮೊನ್ನೆ ಮೋದಿ ಕಾರ್ಯಕ್ರಮದಲ್ಲಿ NDA ಅಭ್ಯರ್ಥಿಗಳಿಗೆ ಮತಯಾಚನೆ ಮಾಡಿದ್ದರು.
Gujarat businessman: 200 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ!
ಆದ್ರೆ ಪ್ರತ್ಯೇಕವಾಗಿ ಕುಮಾರಸ್ವಾಮಿ ಹೆಸರೇಳಿ ಮತ ಕೇಳದಿರುವುದು ಮಂಡ್ಯ ರಾಜಕೀಯ ವಲಯದಲ್ಲಿ ಸುಮಲತಾ ನಡೆ ಸಂಚಲನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಖುದ್ದು ಸುಮಲತಾರ ಮನೆಗೆ ಹೋಗಿ ಬೆಂಬಲ ಕೋರಿದ್ದರು. ಇದಾದ ನಂತರ ಸುಮಲತಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವ ನಿರೀಕ್ಷೆ ಇತ್ತು. ಆದರೆ ಅವರು ಮೌನವಾಗಿದ್ದಾರೆ.