ವಿಜಯಪುರ:- ಗಡಿನಾಡ ಕನ್ನಡಿಗರನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ, ಸೋಲ್ಲಾಪುರ ಜಿಲ್ಲೆಗಳಲ್ಲಿ ಹೆಚ್ಚಾಗಿ ಕನ್ನಡ ಮಾತೃ ಭಾಷೆಯವರಿದ್ದಾರೆ. ಕನ್ನಡ ಮಾಧ್ಯಮದ ಶಾಲೆಗಳಲ್ಲೇ ವಿದ್ಯಾಭ್ಯಾಸ ಮಾಡುತ್ತಾರೆ. ಅವರಿಗೆ ಯಾವುದೇ ಸೌಲಭ್ಯವನ್ನು ಮಹಾರಾಷ್ಟ್ರ ಸರ್ಕಾರ ನೀಡಲ್ಲಾ. ಇದಾಗ್ಯೂ ಇದೀಗ ಶಾಶ್ವತವಾಗಿ ಕನ್ನಡ ಶಾಲೆಗಳನ್ನು ಮೂಲೆಗುಂಪು ಮಾಡಲು ಮುಂದಾಗಿದೆ.
ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.!
ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ ಜಿಲ್ಲೆಗಳಲ್ಲಿ ಇರೋ 250 ಕ್ಕೂ ಅಧಿಕ ಗ್ರಾಮಗಳಲ್ಲಿ ಜನರು ಮಾತೃ ಭಾಷೆ ಕನ್ನಡವೇ ಆಗಿದೆ. ಇವರೆಲ್ಲಾ ಕನ್ನಡ ಮಾಧ್ಯಮ ಶಾಲೆಗಳಲ್ಲಿಯೇ ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಹಲವಾರು ಸಮಸ್ಯೆ ಕಷ್ಟ ಕೋಟಲೆಗಳು ಬಂದರೂ ಅಲ್ಲಿನ ಜನರು ಕನ್ನಡವನ್ನು ಬಿಟ್ಟಿಲ್ಲಾ.
ಗಡಿನಾಡ ಜನರನ್ನು ಮಹಾರಾಷ್ಟ್ರ ಸರ್ಕಾರ ಮಲತಾಯಿ ಧೊರಣೆಯಿಂದ ಕಂಡಿದೆ. ಯಾವುದೇ ಮೂಲಭೂತ ಸೌಕರ್ಯ ಇಲ್ಲಿ ನೀಡದೇ ಸತಾಯಿಸಿದೆ. ಇದೀಗಾ ಅಲ್ಲಿರೋ ಕನ್ನಡ ಮಾಧ್ಯಮ ಶಾಲೆಗಳನ್ನು ಮಟ್ಟ ಹಾಕಲು ನಿಂತಿದ್ದಾರೆ. ಕನ್ನಡ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ನೇಮಕ ಮಾಡಿ ಆದೇಶ ಜಾರಿ ಮಾಡಿದೆ ಮಹಾರಾಷ್ಟ್ರ ಸರ್ಕಾರ. ಸಾಂಗ್ಲಿ ಜಿಲ್ಲೆ ಜತ್ ತಾಲೂಕಿನ 11 ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಮಾಧ್ಯಮದ ಶಿಕ್ಷಕರನ್ನು ಭಾಷಾ ಶಿಕ್ಷಕರೆಂದು ನೇಮಕ ಮಾಡಿ ಆದೇಶ ಜಾರಿ ಮಾಡಿದೆ. ಇದು ಕನ್ನಡ ಶಾಲೆಗಳ ನಿರ್ನಾಮಕ್ಕೆ ಮಾಡಿದ ಷಡ್ಯಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.