ಹಾವೇರಿ: 2 ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಪ್ರಕಟ ಬಳಿಕ ಫಲಿತಾಂಶ ಸ್ಪಷ್ಟವಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಹಿರೇಕೆರೂರು ತಾ. ಮಡ್ಲೂರ ಗ್ರಾಮದಲ್ಲಿ ಮಾತನಾಡಿದ ಅವರು, CM ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ 60 ಸಾವಿರ ಮತಗಳ ಅಂತರ ನೀಡಿ ಅಂತಾರೆ, ನಾನು ಸಿಎಂ ಆಗಿ ಮುಂದುವರೆಯಬೇಂದ್ರೆ 60 ಸಾವಿರ ಮತಗಳ ಅಂತ ಮುಖ್ಯ ಎಂದಿದ್ದಾರೆ. ರಾಜ್ಯದಲ್ಲಿ ಅವರ ಅಭ್ಯರ್ಥಿ ಗೆಲ್ದೆ ಇದ್ರೆ ಎಂದು ಈ ಹಿನ್ನಲೆ ಅವರೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಇನ್ನೂ ಇಡೀ ದೇಶದಲ್ಲಿ 543 ಲೋಕಸಭಾ ಕ್ಷೇತ್ರದಲ್ಲಿ ಕೇವಲ 200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ನವರು ದೇಶ ಆಳುತ್ತೇವೆ ಅಂತ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ನಮ್ಮ ನಾಯಕ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮೆಚ್ಚಿ ದೇಶದಲ್ಲಿ ಬಿಜೆಪಿ 400 ಸೀಟು ಬರುತ್ತವೆ ಎಂದು ಎಲ್ಲ ಸಮೀಕ್ಷೆಗಳು ಹೇಳುತ್ತಿವೆ. ಅದರಿಂದ ಭಯಗೊಂಡ ಕಾಂಗ್ರೆಸ್ಸಿಗರು ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಒಬ್ಬ ಸಚಿವರು ಮೋದಿ, ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದರು. ಈಗ ಅವರು ಹೋದಲೆಲ್ಲಾ ಮೋದಿ ಮೋದಿ ಎಂಬ ಕೂಗು ಹೆಚ್ಚಾಗಿದೆ. ಯಾರು ಮೋದಿಯನ್ನು ಟೀಕಿಸುತ್ತಾರೊ ಅವರ ಜನಪ್ರೀಯತೆ ಹೆಚ್ಚಾಗಿದೆ. ಗುಜರಾತ್ ನಲ್ಲಿ ಮೋದಿಯವರು ಸಿಎಂ ಆಗಿದ್ದಾಗ ಸೋನಿಯಾಗಾಂಧಿ ಮೌತ್ ಕಾ ಸೌದಾಗರ್ ಎಂದರು.
ಅಲ್ಲಿ ಮೋದಿಯವರು ಹೆಚ್ಚಿನ ಸ್ಥಾನ ಗೆದ್ದು ಸಿಎಂ ಆದರು, ಮಣಿಶಂಕರ ಅಯ್ಯರ್ ಅಂತ ಒಬ್ಬ ಕಾಂಗ್ರೆಸ್ ಲೀಡರ್ ಮೋದಿ ಚಾ ಮಾರುವ ಹುಡುಗ ಅಂದರು, ಇಡಿ ದೇಶದ ಜನರು ಮೋದಿಯವರ ಪರವಾಗಿ ನಿಂತು ಪ್ರಧಾನಮಂತ್ರಿ ಮಾಡಿದರು. ಬಿಹಾರ್ ದ ಲಾಲೂ ಪ್ರಸಾದ್ ಯಾದವ್ ಮೋದಿಗೆ ಪರಿವಾರ ಇಲ್ಲ ಅಂದರು, ಇಡಿ ದೇಶವೇ ಅವರ ಪರಿವಾರ ಅಂತ ಎದ್ದು ನಿಂತರು ಎಂದು ಹೇಳಿದರು.