ಚೆನ್ನೈ: ಸನಾತನ ಧರ್ಮ ಕುರಿತು ಟೀಕೆ ವಿವಾದಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ಗೆ (Udhayanidhi Stalin) ರಿಲೀಫ್ ಸಿಕ್ಕಿದೆ. ಉದಯನಿಧಿ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರು ಶಾಸಕರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ (Madras High Court) ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸ್ಟಾಲಿನ್ ಅವರು ಈ ರೀತಿ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಆದರೆ ಇದುವರೆಗೆ ಯಾವುದೇ ನ್ಯಾಯಾಲಯದಿಂದ ಅವರು ಶಿಕ್ಷೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
Broccoli Benefits: ನೀವು ಬ್ರೊಕೊಲಿ ತಿಂದಿದ್ದೀರಾ.? ಇದರ ಆರೋಗ್ಯ ಲಾಭ ಗೊತ್ತಾದ್ರೆ ಆಶ್ಚರ್ಯಪಡ್ತೀರಿ..
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ, ಕಳೆದ ಸೆಪ್ಟೆಂಬರ್ನಲ್ಲಿ ಸನಾತನ ಧರ್ಮದ (Sanatana Dharma) ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಮಾತುಗಳು ಭಾರಿ ಗದ್ದಲ ಎಬ್ಬಿಸಿತ್ತು. ಉದಯನಿಧಿ ಸ್ಟಾಲಿನ್ ಜೊತೆಗೆ ರಾಜ್ಯ ಸಚಿವ ಪಿ.ಕೆ.ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ.ರಾಜಾ ಅವರನ್ನೂ ವಜಾಗೊಳಿಸುವಂತೆ ಅರ್ಜಿದಾರರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.