ಬೆಂಗಳೂರು: ಬಾಡಿಗೆ ಪಡೆಯುವ ವಿಚಾರಕ್ಕೆ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅರೋಪಿಯನ್ನ ಸರ್ಜಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಬಂಧಿತ ಆರೋಪಿಯನ್ನು ಗಂಗರೆಡ್ಡಿ ಎಂದು ಗುರುತಿಸಲಾಗಿದೆ. ಮನೆ ಬಾಡಿಗೆ ಹಣ ಪಡೆಯುವ ವಿಚಾರವಾಗಿ ಹಾಗೂ ಆಕೆಯ ಶೀಲವನ್ನು ಶಂಕಿಸಿ ಹೆಂಡತಿಯ ಜೊತೆ ಆರೋಪಿ ಆಗಾಗ ಗಲಾಟೆ ನಡೆಸುತ್ತಿದ್ದ. ಅಲ್ಲದೇ ಆರೋಪಿ ಬಾಡಿಗೆ ಹಣವನ್ನು ಕುಡಿದು ಹಾಳು ಮಾಡುತ್ತಿದ್ದ ಎಂದು ಪತ್ನಿಯೇ ಹಣ ಪಡೆಯುತ್ತಿದ್ದಳು.
![Demo](https://ainlivenews.com/wp-content/uploads/2023/12/spoorthi-1.jpg)
ಇದೇ ಕಾರಣಕ್ಕೆ ಗಂಗರೆಡ್ಡಿ ತನ್ನ ಪತ್ನಿ ಸುಜಾತ (41) ಎಂಬಾಕೆಯನ್ನು ಜೂ.3 ರಂದು ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಹತ್ಯೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)