ಬೆಂಗಳೂರು: ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ಇದಕ್ಕೆ ಸಂಬಂಧಪಟ್ಟಂತೆ ಇಂದು ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸಿದ್ದಾರೆ. ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರ್ ಪಡಿಸಿದ ಪೊಲೀಸರು. ರಿಮ್ಯಾಂಡ್ ಅಪ್ಲೀಕೇಷನ್ ಸಲ್ಲಿಕೆ ಮಾಡಿರೋ ಪೊಲೀಸ್ರು.
6 ತಿಂಗಳಲ್ಲಿ ನಿಮ್ಮ ಆದಾಯವನ್ನು ಹೆಚ್ಚಿಸುವ ಬೆಳ್ಳುಳ್ಳಿ ಬಗ್ಗೆ ಇಲ್ಲಿದೆ ಮಾಹಿತಿ.!
ಎಸ್ ಪಿಪಿ ಪ್ರಸನ್ನ ಕುಮಾರ್ಕೋರ್ಟ್ ಹಾಲ್ ಗೆ ಆಗಮಿಸಿದರು. ಪೊಲೀಸ್ರು ತೊಂದರೆ ಕೊಟ್ಟಿದ್ದಾರೆಯೆ ಎಂದು ಜಡ್ಜ್ವಪ್ರಶ್ನೆ ಮಾಡಿದ್ದಾರೆ. ಆಗ ಕೋರ್ಟ್ ಹಾಲ್ನಲ್ಲಿ ಪವಿತ್ರ ಗೌಡ ಕಣ್ಣೀರು ಹಾಕಿದ್ದಾರೆ. ಇನ್ನೂ ಕೋರ್ಟ್ ಗೆ ಎಸ್ ಪಿಪಿ ಮಾಹಿತಿ ನೀಡಿದ್ದು, ಸ್ಥಳ ಮಹಜರು ಹಾಗೂ ವಾಹನಗಳ ಜಪ್ತಿ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಸಿಡಿಆರ್ ವರದಿಗಾಗಿ ಪೊಲೀಸ್ರು ಕಾಯುತ್ತಿದ್ದಾರೆ.