ಬೆಂಗಳೂರು/ ಚಿತ್ರದುರ್ಗ: ಸಿನಿಮಾ ರೀತಿಯಲ್ಲಿ ದರ್ಶನ್ ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಿದೆ. ದರ್ಶನ್ ಗ್ಯಾಂಗ್ ಪ್ರತಿಯೊಂದು ಚಟುವಟಿಕೆಗೆಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷ್ಯವಾಗಿ ಪರಿಗಣನೆಯಾಗಲಿದೆ.
ಜೂನ್ 8 ರ ಬೆಳಗ್ಗೆ 9:48ರ ವೇಳೆಗೆ ಸ್ಕೂಟಿಯಲ್ಲಿ ರೇಣುಕಾಸ್ವಾಮಿ ತೆರಳಿದ್ದರು. ಈ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ಮತ್ತು ಇತರರು ಆತನನ್ನು ಹಿಂಬಾಲಿಸಿದ್ದಾರೆ. ಚಳ್ಳಕೆರೆ ಗೇಟ್ ಕಡೆಯಿಂದ ಅಪೊಲೋದತ್ತ ತೆರಳುತ್ತಿದ್ದಾಗ ರೇಣುಕಾಸ್ವಾಮಿಯನ್ನು ದರ್ಶನ್ ಗ್ಯಾಂಗ್ ನಂಬಿಸಿದೆ.
Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ
ನಂತರ ರಿಕ್ಷಾದಲ್ಲಿ ಕೂರಿಸಿ ಕುಂಚಿಗನಾಳ್ ಬಳಿ ಕಾರ್ಗೆ ಶಿಫ್ಟ್ ಮಾಡುವ ಮೂಲಕ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿದ್ದಾರೆ. ಬಾಡಿಗೆಗೆ ಎಂದು ಹೇಳಿ ತಂದಿದ್ದ ರವಿ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಅಂದು ಬೆಳಗ್ಗೆ 11:56ರ ಸುಮಾರಿಗೆ ಕಾರು ಹತ್ತಿಸಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.