ಬೆಂಗಳೂರು:- ಡಿ’ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಇಂದೇ ಚಾರ್ಜ್ಶೀಟ್ ಸಲ್ಲಿಕೆ ಫಿಕ್ಸ್ ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ದರ್ಶನ್ ಗ್ಯಾಂಗ್ ನ ಜಾಮೀನು ಭವಿಷ್ಯವೂ ನಿರ್ಧಾರ ಆಗತ್ತೆ.
ಬೆಂಗಳೂರಿನಲ್ಲಿ ಪಿಒಪಿ ಗಣೇಶ ವಿಗ್ರಹ ಮಾರಾಟ: ಮಾಲಿನ್ಯ ನಿಯಂತ್ರಣ ಮಂಡಳಿ ದಾಳಿ!
ಮಧ್ಯಾಹ್ನದ ನಂತರ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಯಾಗಿರುವ ಎಸಿಪಿ ಭೇಟಿಗೆ ಆಗಮಿಸಿದ್ದಾರೆ.
ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಗೆ ತನಿಖಾಧಿಕಾರಿಗಳು ಡಿಸಿಪಿ ಅನುಮತಿ ಪಡೆದಿದ್ದಾರೆ. ತನಿಖಾಧಿಕಾರಿ, ಎಸ್ಪಿಪಿ ಮೂಲಕ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.