ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಇಂದುಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪೊಲೀಸರು ಒಟ್ಟು 9 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ..
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ಆರಂಭದಲ್ಲಿ 302, 201 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ ತನಿಖೆ ವೇಳೆ ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿರುವ ಪೊಲೀಸರು 9 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 201, 120-ಬಿ, 355, 384, 143,147,148, ರೆ/ವಿ 149 ಅಡಿಯಲ್ಲಿ ಪ್ರಕರಣಗಳನ್ನ ದಾಖಲಿಸಲಾಗಿದೆ ಎಂದು ರಿಮ್ಯಾಂಡ್ ಕಾಪಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
- ಸೆಕ್ಷನ್ 302 – ಕೊಲೆಗೆ ದಂಡನೆ
- ಸೆಕ್ಷನ್ 201 – ಅಪರಾಧಿಯನ್ನು ರಕ್ಷಿಸುವುದಕ್ಕಾಗಿ ತಪ್ಪು ಮಾಹಿತಿ ಕೊಡುವುದು, ಸಾಕ್ಷ್ಯ ನಾಶ
- ಸೆಕ್ಷನ್ 120(ಬಿ) – ಕೊಲೆ ಮಾಡಲು ಮಾಡಿಕೊಂಡ ಅಪರಾಧಿಕ ಒಳ ಸಂಚು. ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ಶಿಕ್ಷೆ ವಿಧಿಸಬೇಕು
- ಸೆಕ್ಷನ್ 355 – ತೀವ್ರ ಉದ್ರೇಕದಿಂದಲ್ಲದೇ ವ್ಯಕ್ತಿಗೆ ಅವಮಾನ ಮಾಡಲು ಅವನ ಮೇಲೆ ಹಲ್ಲೆ, ಅಥವಾ ಅಪರಾಧಿಕ ಬಲಪ್ರಯೋಗ ಮಾಡುವುದು
- ಸೆಕ್ಷನ್ 384 – ಬಲಾಗ್ದ್ರ ಹಣಕ್ಕಾಗಿ ದಂಡನೆ / ಸುಲಿಗೆ
- ಸೆಕ್ಷನ್ 143 – ಕಾನೂನು ಬಾಹಿರ ಕೃತ್ಯ ಎಸಗಿದವರಿಗೆ 6 ತಿಂಗಳ ವರೆಗೆ ಜೈಲು ಅಥವಾ ಸಮಾನಾಂತರ ದಂಡ ವಿಧಿಸಬಹುದಾದ ದಂಡನೆ
- ಸೆಕ್ಷನ್ 147 – ದೊಂಬಿ ಗಲಾಟೆ ಮಾಡಿದರೆ ದಂಡನೆ
- ಸೆಕ್ಷನ್ 148 – ಮಾರಕ ಆಯುಧಗಳನ್ನು ಬಳಸಿ ದೊಂಬಿ ಮಾಡುವುದು
- ಸೆಕ್ಷನ್ 149 – ಒಂದೇ ಉದ್ದೇಶ ಈಡೇರಿಸಲು ಮಾಡಲಾದ ಅಪರಾಧಗಳ ಬಗ್ಗೆ ವಿಧಿಸಿರುವ ಕೂಟದ ಪ್ರತಿಯೊಬ್ಬ ಸದಸ್ಯನೂ ತಪ್ಪಿತಸ್ಥನಾಗುವುದು / ಕೃತ್ಯಕ್ಕೆ ಒಳ ಸಂಚು ವಿಧಿಸಲಾಗಿದೆ.