ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಇಂದು ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜಡ್ಜ್ ಮುಂದೆ ದರ್ಶನ್ & ಗ್ಯಾಂಗ್ ಹಾಜರಾಗಿದ್ದಾರೆ.
Black Pepper Tea: ಕಾಳು ಮೆಣಸಿನ ಚಹಾ ಕುಡಿದಿದ್ದೀರಾ..? ಇದರ ಸೇವನೆಯಿಂದ ಸಿಗಲಿದೆ ಹಲವು ಪ್ರಯೊಜನಗಳು
ಪೊಲೀಸರು ರಿಮ್ಯಾಂಡ್ ಅರ್ಜಿ ಸಿದ್ಧಪಡಿಸಿಕೊಂಡಿದ್ದು, ತನಿಖೆಯ ಇಂಚಿಂಚು ಮಾಹಿತಿ ರಿಮೈಂಡ್ ಅರ್ಜಿಯಲ್ಲಿ ಉಲ್ಲೇಖವಾಗಿದೆ. ತನಿಖೆಯ ಪ್ರಮುಖ ಭಾಗಗಳನ್ನು ಉಲ್ಲೇಖಿಸಲಾಗಿದೆ. ಇನ್ನೂ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಮತ್ತೆ ಕಸ್ಟಡಿಗೆ ಹೋಗ್ತಾರಾ ದರ್ಶನ್ ಎಂಬುವುದನ್ನು ಕಾದು ನೋಡಬೇಕಿದೆ.