ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಮಾಡಿದ ಆರೋಪದಡಿ ಮೈಸೂರಿನಿಂದ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ದರ್ಶನ್ ಪರ ವಕೀಲ ನಾರಾಯಣ ಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ. ಕೊಲೆ ಆರೋಪ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಅವರನ್ನು ಬಂಧಿಸಿಲ್ಲ.
ಬದಲಾಗಿ ಅವರನ್ನು ವಿಚಾರಣೆ ಕರೆದಿದ್ದಾರೆ ಅಷ್ಟೇ ಎಂದು ದರ್ಶನ್ ಪರ ವಕೀಲ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ದರ್ಶನ್ ಪರ ವಕೀಲ ಠಾಣೆಗೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ,
Robbery Case: ಸಿಲಿಕಾನ್ ಸಿಟಿಯಲ್ಲಿ ಬಿಡು ಬಿಟ್ಟ ತುಪ್ಪ ಕದಿಯೋ ಗ್ಯಾಂಗ್..! ಸೂಪರ್ ಮಾರ್ಕೆಟ್ʼಗಳೆ ಇವರ ಟಾರ್ಗೆಟ್
ಹತ್ಯೆ ಆರೋಪ ಪ್ರಕರಣದಲ್ಲಿ ದರ್ಶನ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ ಅವರನ್ನು ಬಂಧಿಸಿಲ್ಲ. ನೇರವಾಗಿ ದರ್ಶನ್ ಅವರೊಂದಿಗೆ ಮಾತನಾಡಿಲ್ಲ. ಪೊಲೀಸರ ತನಿಖೆ ವೇಳೆ ಅಡ್ಡಿಪಡಿಸುವುದು ಸರಿಯಲ್ಲ. ಹಾಗಾಗಿ ಕೆಲ ಹೊತ್ತಿನ ಬಳಿಕ ಮಾತನಾಡಲು ಸಮಯಾವಕಾಶ ನೀಡುವುದಾಗಿ ಪೊಲೀಸರು ತಿಳಿಸಿರುವುದಾಗಿ ವಕೀಲರು ತಿಳಿಸಿದ್ದಾರೆ.