ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ನಿಮಿಷದ ಹಲ್ಲೆ ವಿಡಿಯೋ ಆಧಾರಿಸಿ ದರ್ಶನ್ ಅರೆಸ್ಟ್ ಮಾಡಲಾಗಿದೆ.
ರೇಣುಕಾಸ್ವಾಮಿಯನ್ನು ಆರ್ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ಗೆ ಕರೆ ತಂದಿದ್ದರು. ಈ ಶೆಡ್ನಲ್ಲಿ ದರ್ಶನ್ ಗ್ಯಾಂಗ್ ಹಲ್ಲೆ ನಡೆಸಿ ಹತ್ಯೆ ನಡೆಸಿತ್ತು. ದರ್ಶನ್ ಗ್ಯಾಂಗ್ ಹಲ್ಲೆ ನಡೆಸುತ್ತಿರುವ ದೃಶ್ಯ ಶೆಡ್ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದಾಗ ಆರೋಪಿಗಳ ಹೇಳಿಕೆ ನೀಡಿ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧಾರಿಸಿ ಬಂಧಿಸಿದ್ದಾರೆ ಎಂಬ ವಿಚಾರ ಈಗ ತಿಳಿದು ಬಂದಿದೆ.
ದರ್ಶನ್, ಪವಿತ್ರಗೌಡ ಇಬ್ಬರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ಹೋಗಿರುವ ದೃಶ್ಯಗಳು ಸೆರೆಯಾಗಿದೆ. ಸದ್ಯ ಪೊಲೀಸರ ಬಳಿಕ 30 ನಿಮಿಷದ ವಿಡಿಯೋವಿದ್ದು ಇದೇ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ