ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್ಗೆ ಕಷ್ಟವಾಗಿದೆ. ಕೊಲೆ ನಡೆದ ಬಳಿಕ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿತ್ತು. ಆದರೆ ಪೊಲೀಸರು ವಶಪಡಿಸಿಕೊಂಡ ವಸ್ತುಗಳಿಂದ ಮಹತ್ವದ ಮಾಹಿತಿ ಸಿಗುತ್ತಿದೆ. ಕೊಲೆ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್ಎಸ್ಎಲ್ ವರದಿಯಲ್ಲಿ ಪತ್ತೆ ಆಗಿದೆ.
ದಿನೇ ದಿನೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್ಗೆ ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.
ಎಫ್ಎಸ್ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್ಎಸ್ಎಲ್ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು.
ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್ಎಸ್ಎಲ್ ವರದಿಯಲ್ಲಿ ಧೃಡವಾಗಿದೆ ಎಂದು ತಿಳಿದು ಬಂದಿದೆ.