ಬೆಂಗಳೂರು: ರೇಣುಕಾ ಸ್ವಾಮಿ ಪ್ರಕರಣದಲ್ಲಿ ಪೊಲೀಸರು ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಎಲ್ಲ ಕೋನಗಳಿಂದಲೂ ತನಿಖೆ ಜಾರಿಯಲ್ಲಿದ್ದು, ಈ ವರೆಗೂ 118 ವಸ್ತುಗಳನ್ನು ಪೊಲೀಸರು ವಿವಿಧ ಸ್ಥಳಗಳಿಂದ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಚಿತ್ರದುರ್ಗಗಳಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಆರೋಪಿಗಳನ್ನು ಮಾತ್ರವೇ ಅಲ್ಲದೆ ಅವರಿಗೆ ಸಂಬಂಧಿಸಿದವರ ವಿಚಾರಣೆಯೂ ಚಾಲ್ತಿಯಲ್ಲಿದೆ. ಇನ್ನೂ ಪೊಲೀಸರು ಆರೋಪಿಗಳ ಡಿಎನ್ಎ ಟೆಸ್ಟ್ ಗೆ ಮುಂದಾಗಿದ್ದಾರೆ. ಪವಿತ್ರಾ ಗೌಡ ಸೇರಿ 9 ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಮಾಡಿಸಲಿದ್ದು,
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ಆರೋಪಿಗಳ ರಕ್ತ, ಕೂದಲಿನ ಮಾದರಿ ಸಂಗ್ರಹ ಮಾಡಿ ಕೊಲೆ ನಡೆದ ಜಾಗದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗೂ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯಲಿದೆ. ಎಫ್ಎಸ್ಎಲ್ ಗೆ ಈ ಕೂದಲು, ರಕ್ತದ ಮಾದರಿ ಕಳುಹಿಸಿ ತಾಳೆಯಾಕಿ ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಒಂದೇ ಆದಲ್ಲಿ ಕೊಲೆಗೆ ಮತ್ತಷ್ಟು ಸಾಕ್ಷ್ಯ ಲಭ್ಯವಾಗುತ್ತದೆ. ಹೀಗಾಗಿ ಆರೋಪಿಗಳ ಡಿಎನ್ಎ ಟೆಸ್ಟ್ ಗೆ ಮುಂದಾಗಿದ್ದು, ದರ್ಶನ್ ನನ್ನು ಮೆಡಿಕಲ್ ಚೆಕಪ್ ಗೆ ವಿಕ್ಟೋರಿಯಾ ಗೆ ಕರೆತಂದಿದ್ದಾರೆ. ದರ್ಶನ್ ಗೂ ರಕ್ತದ ಮಾದರಿಹಾಗು ಕೂದಲು ಮಾದರಿ ಪರೀಕ್ಷೆ ಮಾಡಿಸುವ ಸಾಧ್ಯತೆಯಿದೆ.