ಬೆಂಗಳೂರು:– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಅವರನ್ನು ಕೂಡ ಮಹಜರಿಗೆ ಬರುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಹಾಗಾಗಿ ಇಂದು ಚಿಕ್ಕಣ್ಣ ಆರ್ಆರ್ ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ನಲ್ಲಿ ಮಹಜರಿನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.
ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ.. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ..!
ರೇಣುಕಾ ಸ್ವಾಮಿಯ ಕೊಲೆ ನಡೆಯುವುದಕ್ಕೂ ಮುನ್ನ ಇದೇ ರೆಸ್ಟೋರೆಂಟ್ನಲ್ಲಿ ದರ್ಶನ್, ಚಿಕ್ಕಣ್ಣ ಮುಂತಾದವರು ಜೊತೆಯಾಗಿ ಊಟ ಮಾಡಿದ್ದರು ಎನ್ನಲಾಗಿದೆ. ಆ ಕಾರಣದಿಂದಲೇ ಚಿಕ್ಕಣ್ಣ ಅವರನ್ನು ಮಹಜರಿಗೆ ಕರೆಯಲಾಗಿದೆ. ಹತ್ಯೆ ನಡೆದ ದಿನವೇ ಸ್ಟೋನಿ ಬ್ರೂಕ್ಗೆ ಹೋಗಿ ದರ್ಶನ್ರನ್ನು ಭೇಟಿ ಮಾಡಿದ್ದು ಯಾಕೆ ಎಂಬ ಬಗ್ಗೆ ಚಿಕ್ಕಣ್ಣ ಕಾರಣ ತಿಳಿಸಿದ್ದಾರೆ.
ದರ್ಶನ್ ಕರೆ ಮಾಡಿ ಊಟಕ್ಕೆ ಬರುವಂತೆ ಕರೆದಿದ್ರು. ಹೀಗಾಗಿ ಊಟ ಮಾಡಲೆಂದು ಸ್ಟೋನಿ ಬ್ರೂಕ್ಗೆ ಹೋಗಿದ್ದೆ. ದರ್ಶನ್ ಮತ್ತು ನಾನು ಸ್ನೇಹಿತರು. ಹೀಗಾಗಿ ಊಟಕ್ಕೆ ಸೇರುತ್ತಿರುತ್ತೇವೆ. ಅವತ್ತು ಕೂಡ ನನ್ನನ್ನು ಊಟಕ್ಕೆ ಕರೆದಿದ್ದರು. ಆದ್ದರಿಂದ ಅಲ್ಲಿಗೆ ಹೋಗಿದ್ದೆ. ಬಳಿಕ ಅಲ್ಲಿ ಏನಾಯ್ತು ಅಂತ ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಹಾಗೂ ಬೇರೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಧ್ಯಮಗಳಲ್ಲಿ ಬಂದಾಗಲೇ ಈ ವಿಚಾರದ ಬಗ್ಗೆ ಗೊತ್ತಾಯ್ತು. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದು ಚಿಕ್ಕಣ್ಣ ಹೇಳಿಕೆ ನೀಡಿದ್ದಾರೆನೀಡಿದ್ದಾರೆ
ಚಿಕ್ಕಣ್ಣ ಮತ್ತು ದರ್ಶನ್ ನಡುವೆ ಸ್ನೇಹ ಇದೆ. ಚಿಕ್ಕಣ್ಣ ನಟನೆಯ ಸಿನಿಮಾಗಳಿಗೆ ದರ್ಶನ್ ಬೆಂಬಲ ನೀಡುತ್ತಾ ಬಂದಿದ್ದಾರೆ. ಹಲವು ಸಂದರ್ಭಗಳಲ್ಲಿ ಅವರಿಬ್ಬರು ಒಟ್ಟಾಗಿ ಕಾಣಿಸಿಕೊಂಡಿದ್ದುಂಟು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸುದ್ದಿ ಹೊರಬಿದ್ದ ಬಳಿಕ ಚಿಕ್ಕಣ್ಣ ಯಾವುದೇ ಹೇಳಿಕೆ ನೀಡಿರಲಿಲ್ಲ. ಈಗ ಪೊಲೀಸರ ಎದುರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ತಮ್ಮ ಹೇಳಿಕೆ ನೀಡಿದ್ದಾರೆ.