ಕೆಲಸಕ್ಕಾಗಿ ದಕ್ಷಿಣ ಏಷ್ಯಾ ರಾಷ್ಟ್ರ ಲಾವೋಸ್ಗೆ ಹೋಗಿ ತೊಂದರೆಗೆ ಸಿಲುಕಿದ್ದ 17 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.
ಲಾವೋಸ್ನಲ್ಲಿ ಕೆಲಸಕ್ಕೆಂದು ಹೋಗಿ ಸುರಕ್ಷಿತವಲ್ಲದ ಕೆಲಸಗಳಲ್ಲಿ ಹಾಗೂ ಕಾನೂನುಬಾಹಿರ ಕೆಲಸಕ್ಕೆ ಪ್ರೇರಿಪಿಸುವವರ ಜಾಲಕ್ಕೆ ಸಿಲುಕಿದ್ದ 17 ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ. ಇದು ಲಾವೋಸ್ನಲ್ಲಿನ ನಮ್ಮ ರಾಯಭಾರ ಕಚೇರಿ ಅಧಿಕಾರಿಗಳ ಪರಿಶ್ರಮಕ್ಕೆ ಹಿಡಿದ ಕನ್ನಡಿ ಎಂದು ಜೈ ಶಂಕರ್ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ನಾವು ಭಾರತದ ಹೊರಗಿನವರ ನಮ್ಮವರ ಜೊತೆ ಇದ್ದೇವೆ ಎಂದು ತೋರಿಸುವ ಮೋದಿ ಗ್ಯಾರಂಟಿ ಇದು ಎಂದು ಜೈಶಂಕರ್ ಹೇಳಿದ್ದಾರೆ.