ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆಯ ತೋಟದ ಮನೆಯಲ್ಲಿ ಸಿಕ್ಕಿಲ್ಲ ಎಂದು ಶಾಸಕ ಸಾರಾ ಮಹೇಶ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ. ದೇವೇಗೌಡ, ಶಾಸಕ ಸಾರಾ ಮಹೇಶ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು,
ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ಕೇಸ್ ದಾಖಲು ಆಗವುದಕ್ಕೆ ಮುಂಚೆಯೇ ಮಾಧ್ಯಮಗಳಿಗೆ ಹೇಗೆ ಗೊತ್ತಾಯ್ತು? ತೋಟದಲ್ಲಿ ಆ ಮಹಿಳೆ ಇದ್ದರು ಎಂಬುದರ ಒಂದು ವೀಡಿಯೋ ಯಾಕೆ ಬಂದಿಲ್ಲ?. ಅಷ್ಟಕ್ಕೂ ಸಂತ್ರಸ್ತ ಮಹಿಳೆ ತೋಟದಲ್ಲಿ ಸಿಕ್ಕಿಲ್ಲ. ಹುಣಸೂರಿನ ಕರಿಗೌಡ ರಸ್ತೆಯಲ್ಲಿರುವ ಸಂತ್ರಸ್ತೆಯ ಸಂಬಂಧಿ ಮನೆಯಿಂದ ಆಕೆಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ರಾಜಗೋಪಾಲ್ ತೋಟದಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದು ಸಾಬೀತು ಮಾಡಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಈ ಕ್ಷಣವೇ ಜೆಡಿಎಸ್ ಗೂ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು. ಪೆನ್ ಡ್ರೈವ್ ಹಂಚಿದವರನ್ನು ಯಾಕೆ ಇನ್ನೂ ಬಂಧಿಸಿಲ್ಲ. ಎಸ್ಐಟಿಯಲ್ಲಿ ಇರುವ ಕೆಲ ಅಧಿಕಾರಿಗಳು ಕಾಂಗ್ರೆಸ್ನ ಕೈ ಗೊಂಬೆ ರೀತಿ ವರ್ತಿಸುತ್ತಿದ್ದಾರೆ.
ಜೆಡಿಎಸ್ ಮುಖಂಡರನ್ನು ಹತ್ತಿಕುವ ಕೆಲಸ ಈ ಪ್ರಕರಣದ ಮೂಲಕ ಆಗ್ತಿದೆ. ಸಂತ್ರಸ್ತ ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ?. ಆ ಸಂತ್ರಸ್ತ ಮಹಿಳೆಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದಿರಾ?. ಎಸ್ಐಟಿ ಅಧಿಕಾರಿಗಳನ್ನು ಇಟ್ಟುಕೊಂಡು ನಮ್ಮ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.