ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ರಿಲೀಸ್ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ರಾಜಕೀಯ ತಿರುವು ಪಡೆದುಜಕೊಂಡಿರುವ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ದಿನಕ್ಕೊಬ್ಬರ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದೀಗ ಕೆ.ಆರ್.ನಗರ ಮಹಿಳೆ ಅಪಹರಣ ಕೇಸ್ಗೆ ಸಂಬಂಧಿಸಿದಂತೆ ಸಂತ್ರಸ್ಥೆಯನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುವ ಮೊದಲು ಮಾಡಲಾಗಿದೆ ಎನ್ನಲಾಗಿರುವ ವಿಡಿಯೋ ವೈರಲ್ ಆಗಿದೆ.
‘ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲ, ನಾನಾಗಿ ಮನೆಯಿಂದ ಬಂದಿದ್ದೇನೆ. ಭವಾನಿ, ರೇವಣ್ಣ, ಪ್ರಜ್ವಲ್ ಮತ್ತು ಬಾಬಣ್ಣರಿಂದ ಯಾವುದೇ ತೊಂದರೆ ಆಗಿಲ್ಲ. ನಮ್ಮ ಊರಿನವರು ಏನೇನೋ ಮಾತನಾಡಿದ್ದನ್ನು ಕೇಳಿ ಬೇಸರವಾಗಿತ್ತು. ಹೀಗಾಗಿ 4 ದಿನ ಇದ್ದು ಹೋಗೋಣವೆಂದು ನೆಂಟರ ಮನೆಗೆ ಬಂದಿದ್ದೇನೆ. ಸಂಬಂಧಿಕರ ಮನೆಯಲ್ಲಿ ಇದ್ದೇನೆ, 2 ದಿನಗಳ ಬಳಿಕ ನಾನೇ ಬರುತ್ತೇನೆ ಎಂದಿದ್ದಾರೆ.
‘ಗಾಬರಿ ಪಡಬೇಡಿ ಏನೂ ತೊಂದರೆ ಆಗಿಲ್ಲ, ಚನ್ನಾಗಿ ಇದ್ದೇನೆ ವಾಪಸ್ ಬರುತ್ತೆನೆ. ಯಾರೂ ಏನೇ ಅಂದರು ತಲೆಗೆ ಹಾಕೊ ಬೇಡಿ ಅರಾಮಾಗಿ ಇರಿ. ನಾನು ಸೇಫ್ ಆಗಿ ಇದ್ದೀನಿ. ಅವರಿಂದ ನಮಗೆ ತೊಂದರೆ ಆಗಿಲ್ಲ. ಮೊಬೈಲ್ಗೂ ನಮಗೂ ಸಂಬಂಧವಿಲ್ಲ. ನಾಲ್ಕು ದಿನ ನೆಂಟರ ಮನೆಗೆ ಹೋಗಿದ್ದೆ, ಬಂದು ಎಲ್ಲಿ ಮಾಹಿತಿ ಕೊಡಬೇಕೊ ಕೊಡುತ್ತೆನೆ. ಆದರೆ, ಪೊಲೀಸರ ಕಳಿಸಿ ಮನೆ ಬಳಿ ಟಾರ್ಚರ್ ಕೊಡಬೇಡಿ. ಮಕ್ಕಳು ಮರಿ ಇರ್ತಾರೆ ಭಯಪಡುತ್ತಾರೆ.
ನಾವು ಕೂಲಿ ಮಾಡಿ ಜೀವನ ಸಾಗಿಸೋರು, ನಮ್ಮ ಹೊಟ್ಟೆ ಮೇಲೆ ಹೊಡಿಬೇಡಿ. ಪೊಲೀಸರು ಬಂದು ಹೋಗ್ತಾ ಇದ್ದರೆ ಅಕ್ಕ ಪಕ್ಕದವರು ಏನಂದುಕೊಳ್ಳಲ್ಲ. ಕೂಲಿ ಮಾಡಿಕೊಂಡು ಇರೋರಿಗೆ ನೆಮ್ಮದಿಯಾಗಿ ಇರಲು ಬಿಡಿ. ನನಗೆ ಯಾರಿಂದ ತೊಂದರೆ ಆಗಿಲ್ಲ ,
ತೊಂದರೆ ಆಗಿದ್ದರೆ ನಾನೇ ಬಂದು ಹೇಳುತ್ತೇನೆ. ನನಗೆ ಏನೂ ತೊಂದರೆ ಇಲ್ಲ, ನೀವು ತೊಂದರೆ ಕೊಟ್ಟರೆ ನನಗೆ ಹಾಗೂ ನನ್ನ ಗಂಡನಿಗೆ ಏನಾದರೂ ಆದರೆ ನೀವೇ ಜವಾಬ್ದಾರಿ ಆಗಬೇಕಾಗುತ್ತೆ. ನೀವೆ ಹೊಣೆ, ಹೊಣೆ ಆಗೋದಾದರೆ ಮನೆ ಹತ್ರ ಬನ್ನಿ. ನನ್ ಮಗ ಗೊತ್ತಿಲ್ಲದೆ ಗಾಬರಿಪಟ್ಟು ಹೀಗೆ ಮಾಡಿದ್ದಾನೆ, ಯಾರೂ ನನಗೆ ತೊಂದರೆ ಕೊಟ್ಟಿಲ್ಲ. ನಾನೇ ಹೋಗಿದಿನಿ, ಸೇಫ್ ಆಗಿ ಬರ್ತೇನೆ ಎಂದಿದ್ದಾರೆ.