ಬೆಂಗಳೂರು: ಏನೂ ತಪ್ಪು ಮಾಡದೇ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂಬ ನೋವಿನಲ್ಲಿ ರೇವಣ್ಣ ಹತ್ತು ನಿಮಿಷಗಳ ಕಾಲ ಕಣ್ಣೀರು ಹಾಕಿದರು ಎಂದು ಜೆಡಿಎಸ್ ಮುಖಂಡ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಅವರನ್ನು ಬೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ರೇವಣ್ಣ ಜೈಲಿಗೆ ಹೋದ ದಿನದಿಂದ ಅವರ ಭೇಟಿಗೆ ಬಂದಿರಲಿಲ್ಲ. ಇಂದು ಅವರನ್ನು ಭೇಟಿಯಾಗಿದ್ದೇನೆ. ಅವರು ಆರಾಮವಾಗಿ ಕೂತಿದ್ದು, ಜೊತೆಯಲ್ಲಿ ಚಹಾ ಕುಡಿದು, ಹಳೆಯ ವಿಚಾರಗಳನ್ನು ಮೆಲುಕು ಹಾಕಿದ್ರು. ಅವರಿಗೆ ಈಗಲೂ ಅಭಿವೃದ್ಧಿ ಕಾರ್ಯಕ್ರಮಗಳದ್ದೇ ಚಿಂತೆ. ಅಲ್ಲದೇ ನಾನೇನೂ ತಪ್ಪು ಮಾಡಿದ್ದೇನೆ ಎಂಬ ಚಿಂತೆಯಲ್ಲಿದ್ದಾರೆ ಎಂದರು.
ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!
ನನ್ನ ಬಳಿ ಅವರು ಮಾತನಾಡಿ, ಸಂತ್ರಸ್ತ ಮಹಿಳೆ ಜೊತೆ ಮಾತನಾಡಿ ಆರು ವರ್ಷಗಳಾಗಿವೆ. ನನ್ನನ್ನು ಈ ಪ್ರಕರಣದಲ್ಲಿ ಸೇರಿಸಿ ಹೀಗೆ ಮಾಡಿದ್ದಾರೆ. ನಾನು ತಪ್ಪು ಮಾಡಿದ್ರೆ ಇನ್ನೂ ಶಿಕ್ಷೆ ಕೊಡಲಿ ಅನುಭವಿಸಬಹುದಿತ್ತು ಎಂದು ರೇವಣ್ಣ ಭಾವುಕರಾದರು ಎಂದು ಅವರು ಹೇಳಿದ್ದಾರೆ. ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ ಅವರು, ರಾಜಕೀಯ ಹೇಗೆ ನಡೆಯುತ್ತಿದೆ? ನಾವು ಎಲ್ಲೆಲ್ಲಿ ಎಡವಿದ್ದೇವೆ?
ನಮ್ಮ ಸರ್ಕಾರದ ಇದ್ದಾಗ ಕಾರ್ಯಕರ್ತರಿಗೆ ಏನೂ ಮಾಡಲು ಆಗಲಿಲ್ಲ. ಅಲ್ಪಾವಧಿ ಅಧಿಕಾರ ಬಂತು. ಅಧಿಕಾರ ಅನುಭವಿಸಿದವರು ಹೊರಟು ಹೋದ್ರು. ಮಂತ್ರಿಯಾಗಿದ್ದವರು ಹೊರಟು ಹೋದ್ರು. ನೀವು ಗೌಡರಿಗೋಸ್ಕರ ಪಕ್ಷದಲ್ಲಿ ಉಳಿದು ಗೌಡರಿಗೆ ನೆಮ್ಮದಿ ಕೊಟ್ಟಿದ್ದೀರಿ ಎಂದು ವಿಚಾರ ಹಂಚಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವಾಗಿ ಯಾವುದೇ ಚರ್ಚೆ ಮಾಡಲಿಲ್ಲ. ರೇವಣ್ಣ ಕೂಡ ಪ್ರಜ್ವಲ್ ಬಗ್ಗೆ ಏನೂ ಹೇಳಲಿಲ್ಲ ಎಂದರು.