ಬೆಂಗಳೂರು:- ಬೆಂಗಳೂರಿನ ಕೆಂಗೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ ಧಾರವಾಡ ಪೊಲೀಸರ ಕಾರ್ಯಾಚರಣೆ ; ಕಳ್ಳತನ ಮಾಡಿದ್ದ ಮೂವರ ಬಂಧನ
ಮೃತರನ್ನು ಪತಿ ಅಸೀಫ್ ಅಹಮದ್ ಹಾಗೂ ಪತ್ನಿ ಶಬಾನಾ ಬೇಗಮ್ ಎಂದು ಗುರುತಿಸಲಾಗಿದೆ. ಮೃತ ಗಂಡ, ಹೆಂಡತಿ ಸ್ಕೂಟರ್ನಲ್ಲಿ ಟ್ಯಾನರಿ ರಸ್ತೆಯಿಂದ ಉತ್ತರಹಳ್ಳಿಯ ದರ್ಗಾಕ್ಕೆ ಹೋಗುತ್ತಿದ್ದರು. ಈ ವೇಳೆ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಲಾರಿ ಚಾಲಕ ಅಪಘಾತದ ಬಳಿಕ ಸ್ಕೂಟರ್ನ್ನು ಮುಂದಕ್ಕೆ ಎಳೆದುಕೊಂಡು ಹೋಗಿದ್ದಾನೆ. ಅಪಘಾತದ ದೃಶ್ಯ ಪಕ್ಕದ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.