ವಿಜಯಪುರ:ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸಾವಿಗೀಡಾದರು. ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ರಾಜ್ ಕುಮಾರ್ ಸಿನಿಮಾಗಳಲ್ಲಿದ್ದ ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ: CM ಸಿದ್ದರಾಮಯ್ಯ!
35 ವರ್ಷದ ಆರೀಪ್ ವಡ್ಡೋಡಗಿ, 65 ವರ್ಷದ ಮೈಬೂಬ್ಸಾಬ್ ಕರಜಗಿ ಸ್ಥಳದಲ್ಲೆ ಸಾವನ್ನಪ್ಪಿದ ದುರ್ದೈವಿಗಳು. ಹೂವಿನ ಹಿಪ್ಪರಗಿಯಿಂದ ದೇವರಹಿಪ್ಪರಗಿಗೆ ಕಡೆಗೆ ಬೈಕ್ ಸವಾರರು ಬರ್ತಿದ್ದರು. ಇದೇ ವೇಳೆ ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ಸಮೇತ ಚಾಲಕ ಪರಾರಿ ಆಗಿದ್ದಾನೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.