ಗದಗ: ಅನುಭವಿ ಹಾಗೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಂದ ಗುರುತಿಸಿಕೊಂಡಿರುವ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಅವರು ಬಹಳ ಅಂತರದಿಂದ ಆಯ್ಕೆಗೊಂಡು ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ ಹೇಳಿದರು. ಅವರು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಭೇಟಿಯಾದ ಲೆಹರ್ಸಿಂಗ್..!
ಬೊಮ್ಮಾಯಿ ಅವರು ಮುಂಡರಗಿ ಭಾಗದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ಕೊಟ್ಟು ರೈತ ಪರ ಕೆಲಸ ಮಾಡುವುದರ ಜೊತೆಗೆ ಮುಖ್ಯಮಂತ್ರಿ ಆಗಿದ್ದಾಗ ರೈತರು ಮತ್ತು ವಿದ್ಯಾರ್ಥಿಗಳಿಗೆ ಕೂಲಿಕಾರ್ಮಿಕರಿಗೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು, ಇಂತಹ ಅಭಿವೃದ್ಧಿ ಹರಿಕಾರರನ್ನು ಆಯ್ಕೆಗೊಳಿಸುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಬೇಕು ದೇಶದಲ್ಲಿ ಪ್ರಧಾನ ಮಂತ್ರಿ ಯೋಜನೆ ಜನತೆಗೆ ಗ್ಯಾರಂಟಿಯಾಗಿದ್ದು ದೇಶದ ಭವಿಷ್ಯ ಮತ್ತು ಅಭಿವೃದ್ಧಿ ಪಥದತ್ತ ಸಾಗಲು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಹೊಣೆ ಎಲ್ಲರ ಮೇಲಿದೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಏನು ಪ್ರಯೋಜನ ಇಲ್ಲ ಕೇಂದ್ರ ಸರ್ಕಾರ ಕೊಡುವ 5 ಕೆ.ಜಿ ಅಕ್ಕಿ ತಮ್ಮ ಸರ್ಕಾರದ್ದು ಎಂದು ಹೇಳಿಕೊಳ್ಳುತ್ತಿದೆ ಕಾಂಗ್ರೆಸ್ ಸರ್ಕಾರ. ಕೋವಿಡ್ ಸಮಯದಲ್ಲಿ ಮೋದಿ ಕೈಗೊಂಡ ಮುಂಜಾಗ್ರತೆ ಕ್ರಮದಿಂದ ಇಂದು ನಾವೆಲ್ಲ ಆರೋಗ್ಯವಾಗಿದ್ದೇವೆ ಸಮಗ್ರತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆಗೊಳಿಸಬೇಕೆಂದರು.
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಹೇಮಗಿರಿಶ ಹಾವಿನಾಳ, ಮುಖಂಡರಾದ ಕರಬಸಪ್ಪ ಹಂಚಿನಾಳ, ಶಿವಕುಮಾರಗೌಡ ಪಾಟೀಲ್, ರವಿ ದಂಡಿನ್, ಲಿಂಗರಾಜಗೌಡ ಪಾಟೀಲ್, ಆನಂದಗೌಡ ಪಾಟೀಲ್, ಸಣ್ಣಈರಪ್ಪ ಹಳೆಪ್ಪನವರ, ಕೊಟ್ರೇಶ ಅಂಗಡಿ, ಶಿವಪ್ಪ ಚಿಕ್ಕಣ್ಣವರ, ಕುಮಾರಸ್ವಾಮಿ ಹಿರೇಮಠ, ರಜನಿಕಾಂತ ದೇಸಾಯಿ, ಎಸ್ ವಿ ಪಾಟೀಲ್, ಕವಿತಾ ಉಳ್ಳಾಗಡ್ಡಿ, ಜ್ಯೋತಿ ಹಾನಗಲ್, ನಾಗೇಶ್ ಹುಬ್ಬಳ್ಳಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)