17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಟೀಮ್ ಮ್ಯಾನೇಜ್ಮೆಂಟ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಗುಜರಾತ್ ಟೈಟನ್ಸ್ ತಂಡದಿಂದ ಟ್ರೇಡ್ ಮಾಡಿದ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿತು. ಇದರಿಂದ ಮುಂಬೈ ಡ್ರೆಸ್ಸಿಂಗ್ ರೂಮ್ನಲ್ಲಿ ಅಸಮಾಧಾನದ ಹೊಗೆ ಎದ್ದಿತ್ತು. ಹೀಗಾಗಿಯೇ ಮುಂಬೈ ತಂಡದ ಸ್ಟಾರ್ ಪ್ಲೇಯರ್ ಮುಂದಿನ ಸೀಜನ್ನಲ್ಲಿ ತವರು ತಂಡದ ಪರ ಆಡುವುದು ಡೌಟ್ ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.
ಮತ್ತೆ ಹಾಟ್ ಸಿಟಿ ಆಗ್ತಿದ್ಯಾ ಸಿಲಿಕಾನ್ ಸಿಟಿ! – ಹವಮಾನ ತಜ್ಞರು ಹೇಳಿದಿಷ್ಟು!
ರಾಷ್ಟ್ರೀಯ ತಂಡವನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ. ರೋಹಿತ್ ಶರ್ಮಾ ಪ್ರಸಕ್ತ ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನವನ್ನೇ ನೀಡಿದ್ದಾರೆ. ಅವರು 32.07ರ ಸರಾಸರಿ ಹಾಗೂ 150ರ ಸ್ಟ್ರೈಕ್ ರೇಟ್ನಲ್ಲಿ 417 ರನ್ ಸಿಡಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ ಒಂದು ಅರ್ಧಶತಕ ಸೇರಿದೆ.
ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಂದಿನ ಬಾರಿ ಐಪಿಎಲ್ ಹರಾಜಿಗೂ ಮುನ್ನ ಇಶಾನ್ ಕಿಶನ್ ಅವರನ್ನು ರಿಟೇನ್ ಮಾಡಿಕೊಳ್ಳುವುದು ಡೌಟ್ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಇಶಾನ್ ಅವರನ್ನು ಬೇಕಿದ್ದರೆ, ರೈಟ್ ಟು ಮ್ಯಾಚ್ ಕಾರ್ಡ್ ಬಳಸಿ ಮುಂಬೈ ಪಡೆಯಬಹುದು.
ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ತಮ್ಮ ಕೊನೆಯ ಪಂದ್ಯವನ್ನು ಆಡಿ ಆಗಿದೆ ಎಂದು ಚೋಪ್ರಾ ತಿಳಿಸಿದ್ದಾರೆ. ನನಗೆ ಅನಿಸಿದ ಪ್ರಕಾರ ರೋಹಿತ್ ಶರ್ಮಾ ಮುಂದಿನ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಾಣಿಸಿಕೊಳ್ಳುವುದಿಲ್ಲ ಎಂದು ಚೊಪ್ರಾ ತಿಳಿಸಿದ್ದಾರೆ.