ಇತ್ತೀಚಿನ ವರದಿಗಳ ಪ್ರಕಾರ ಭಾರತದ ಟಿ20 ವಿಶ್ವಕಪ್ ತಂಡ ಕಟ್ಟುವಾಗಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ 15ರ ಬಳಗದಲ್ಲಿ ಸ್ಥಾನ ನೀಡಲು ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ಗೆ ಇಷ್ಟ ಇರಲಿಲ್ಲ ಎಂಬ ಸಂಗತಿ ಇತ್ತೀಚಿನ ವರದಿಗಳ ಮೂಲಕ ಹೊರಬಿದ್ದಿದೆ. 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯಲ್ಲೇ ಟಿ20 ವಿಶ್ವಕಪ್ ಗೆದ್ದಿರುವ ಭಾರತ ತಂಡ, 2013ರ ಬಳಿಕ ಐಸಿಸಿ ಆಯೋಜಿತ ಟೂರ್ನಿಗಳಲ್ಲಿ ಟ್ರೋಫಿ ಗೆಲುವಿನ ಬರ ಎದುರಿಸಿದೆ. ಈ ಬಾರಿಯಾದರೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುತ್ತದೆ ಎಂಬುದು ಅಭಿಮಾನಿಗಳ ನಿರೀಕ್ಷೆ.
ಆದರೆ, ಕ್ಯಾಪ್ಟನ್ ರೋಹಿತ್ ಮತ್ತು ವೈಸ್ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ನಡುವಣ ವೈಮನಸ್ಸು ತಂಡದ ಪ್ರದರ್ಶನದ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕ ಕೂಡ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಮನೆ ಮಾಡಿದೆ. 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ನಡುವಣ ಮುಸುಕಿನ ಗುದ್ದಾಟದ ಕಾರಣ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯ ಕೊನೆಯಸ್ಥಾನದೊಂದಿಗೆ ಪ್ಲೇ-ಆಫ್ಸ್ ರೇಸ್ನಿಂದ ಹೊರಬಿದ್ದಿದೆ.
ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಟಿ20 ಕ್ರಿಕೆಟ್ ವಿಶ್ವಕಪ್ನಲ್ಲೂ ಭಾರತ ತಂಡದಲ್ಲಿ ಈ ರೀತಿ ಆಗದೇ ಇರಲಿ ಎಂದು ಅಭಿಮಾನಿಗಳು ಈಗ ಪ್ರಾರ್ಥನೆ ಶುರು ಮಾಡಿದ್ದಾರೆ. ಟೀಮ್ ಇಂಡಿಯಾಗೆ ಹತ್ತಿರದ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಲಯದ ಬಗ್ಗೆ ನಾಯಕ ರೋಹಿತ್ ಶರ್ಮಾ ಮತ್ತು ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ಗೆ ಅಸಮಾಧಾನವಿದೆ ಎಂಬುದು ತಿಳಿದುಬಂದಿದೆ. ಅಂದಹಾಗೆ ಕಳೆದ ವರ್ಷ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆ ಎದುರಿಸುವ ಮುನ್ನ ಭಾರತದ ಟಿ20 ತಂಡದ ಕ್ಯಾಪ್ಟನ್ ಆಗಿ ಯಶಸ್ಸು ಕಂಡಿದ್ದರು.
ಆದರೆ, 2023ರ ಐಸಿಸಿ ಒಡಿಐ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು 5 ತಿಂಗಳು ಸಮಯ ಕ್ರಿಕೆಟ್ನಿಂದ ದೂರ ಉಳಿದಿದ್ದದ್ದು ಅವರ ಲಯದ ಮೇಲೆ ಪರಿಣಾಮ ಬೀರಿದೆ. ಐಪಿಎಲ್ 2024 ಟೂರ್ನಿಯಲ್ಲಿ 200 ರನ್ ಗಳಿಸಿರುವ ಹಾರ್ದಿಕ್ ಕೇವಲ 11 ವಿಕೆಟ್ ಮಾತ್ರವೇ ಪಡೆದಿದ್ದಾರೆ. ಇದು ಟೀಮ್ ಇಂಡಿಯಾದ ಕ್ಯಾಪ್ಟನ್ ಮತ್ತು ಸೆಲೆಕ್ಟರ್ಸ್ಗೆ ಅಸಮಾಧಾನ ತಂದಿದೆ ಎನ್ನಲಾಗಿದೆ.