ಬೆಂಗಳೂರು: ಕೃಷಿ ಭೂಮಿಗೆ ಖಾತಾ ಪೋಡಿ ಮಾಡಿಕೊಡಲು $28 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಹದೇವಪುರ ಆರ್ಐ ವಸಂತ್ ಅವರು ಬೆಂಗಳೂರಿನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್ಐ ವಸಂತ್ ಅವರು ಈಗಾಗಲೇ 3.5 ಲಕ್ಷ ಹಣ, 4 ಲಕ್ಷದ ಚೆಕ್ ಪಡೆದಿದ್ದಾರೆ. ನಿನ್ನೆ ಸಂಜೆ 4 ಲಕ್ಷ ರೂ. ಪಡೆಯುವಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ವಸಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ವಸಂತ್ ಮನೆಯಲ್ಲಿದ್ದ 9 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.
ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ ಈ ಮೊದಲೇ ಚೆಕ್ನಲ್ಲಿ 4 ಲಕ್ಷ ರೂ. ಹಣವನ್ನು ಚೆಕ್ನಲ್ಲಿ ಪಡೆದಿದ್ದ ಎಂದು ತಿಳಿದು ಬಂದಿದೆ. ಬುಧವಾರ ಖಾಸಗಿ ಹೋಟೆಲ್ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ
![Demo](https://ainlivenews.com/wp-content/uploads/2023/12/spoorthi-1.jpg)
ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)