ಬೆಂಗಳೂರು: ಬಹಳ ವರ್ಷಗಳಿಂದ ಒಕ್ಕಲಿಗ ನಾಯಕತ್ವಕ್ಕಾಗಿ ಸಂಘರ್ಷ ನಡೆಯುತ್ತಿದೆ. ಒಕ್ಕಲಿಗ ನಾಯಕತ್ವ ವಹಿಸಿಕೊಳ್ಳಲು ಈ ಚಿಲ್ಲರೆ ಕೆಲಸ ಮಾಡಿದರೆ ಆಗುವುದಿಲ್ಲ ಎಂದು ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೆನ್ಡ್ರೈವ್, ಸಿಡಿ ಬಿಡುವಂಥ ನೀಚ ಕೆಲಸದಿಂದ ಯಾರೂ ಒಕ್ಕಲಿಗ ನಾಯಕರಾಗುವುದಿಲ್ಲ. ರಾಜಕೀಯ ಲಾಭಕ್ಕಾಗಿ ಎಷ್ಟೋ ಮನೆಗಳನ್ನು ಪೆನ್ಡ್ರೈವ್ ರಿಲೀಸ್ ಮಾಡಿ ಹಾಳು ಮಾಡಿದ್ದಾರೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ದೇವರು ಇದ್ದಾನೋ ಇಲ್ವೋ ಅನ್ನುವಷ್ಟರ ಮಟ್ಟಿಗೆ ಸಂತ್ರಸ್ತರ ವಿಚಾರದಲ್ಲಿ ಕೆಟ್ಟ ಬೆಳವಣಿಗೆ ಆಗಿದೆ. ಪ್ರಜ್ವಲ್ ಪರಾರಿಯಲ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇದೆ ಎಂದು ದೂರಿದರು. ಸಾವಿರಾರು ಪೆನ್ಡ್ರೈವ್ಗಳಿವೆ. ಇಷ್ಟೆಲ್ಲ ಮಾಡಲು ಎಷ್ಟು ಸಮಯ, ಎಷ್ಟು ಹಣ ಬೇಕಾಗುತ್ತೆ? ಕಳೆದ ಆರು ತಿಂಗಳಿನಿಂದ ಈ ಪೆನ್ಡ್ರೈವ್ ಸಿದ್ಧತೆ ನಡೆಯುತ್ತಿರಬಹುದು. ಪ್ರಜ್ವಲ್ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸತ್ಯ ಹೊರಗೆ ಬರಬೇಕು. ಪ್ರಕರಣದಲ್ಲಿ ರಾಜಕೀಯ ಪ್ರವೇಶವಾಗಿದೆ ಎಂದರು.