ಹುಬ್ಬಳ್ಳಿ: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ತುಳಜಾಭವಾನಿ ದೇವಸ್ಥಾನ ಹಾಗೂ ಹು-ಧಾ ಕೇಂದ್ರ ಪಂಚ ಸಮಿತಿ ವತಿಯಿಂದ ಸಹಸ್ರಾರ್ಜುನ ಮಹಾರಾಜರ ಜಯಂತಿ ಉತ್ಸವದ ಮೆರವಣಿಗೆಯ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭವನ್ನು ನವೆಂಬರ್ 19ರಂದು ಬೆಳಿಗ್ಗೆ 9 ಗಂಟೆಗೆ ನಗರದ ದಾಜೀಬಾನಪೇಟೆಯ ತುಳಜಾಭವಾನಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹು-ಧಾ ಎಸ್. ಎಸ್.ಕೆ ಸಮಾಜದ ಅಧ್ಯಕ್ಷ ಸತೀಶ ಮೆಹರವಾಡೆ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಸಹಸ್ರಾರ್ಜುನ ರಾಜರಾಜೇಶ್ವರ ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿ ನಿಮಿತ್ತವಾಗಿ ಶ್ರೀ ಸಹಸ್ರಾರ್ಜುನ ಮಹಾರಾಜರ ಬೆಳ್ಳಿ ಮೂರ್ತಿಯ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹಾಗೂ ಧ್ವಜಾರೋಹಣವನ್ನು ಹು-ಧಾ ಮಹಾಪೌರರಾದ ವೀಣಾ ಬರದ್ವಾಡ ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹು-ಧಾ ಎಸ್. ಎಸ್.ಕೆ. ಸಮಾಜದ ಅಧ್ಯಕ್ಷರಾದ ಸತೀಶ್ ಮೆಹರವಾಡೆ ವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಮಹೇಶ್ ಟೆಂಗಿನಕಾಯಿ, ಹು-ಧಾ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಮಾಜಿ ಶಾಸಕರು ಹಾಗೂ ಎಸ್.ಎಸ್.ಕೆ. ಸಮಾಜದ ರಾಜ್ಯಾಧ್ಯಕ್ಷರಾದ ಅಶೋಕ ಕಾಟವೆ,
ಮುಖಂಡರಾದ ವಿಠ್ಠಲ ಲದವಾ, ಕಿರಣ್ ಪೂಜಾರಿ, ನಾರಾಯಣ ಖೋಡೆ, ಭಾಸ್ಕರ್ ಜಿತೂರಿ, ನಾರಾಯಣ ಖೋಡೆ, ತುಕಾರಾಮಸಾ ಖೋಡೆ, ವಸಂತ ಲದವಾ ಸೇರಿದಂತೆ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಜಯಂತಿಯ ಸಮಾರೋಪ ಸಮಾರಂಭವು ನಾಳೆ ಸಂಜೆ 6 ಗಂಟೆಗೆ ಜರುಗಲಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅಶೋಕ ಕಾಟವೆ, ನಾರಾಯಣ ಖೋಡೆ, ಶ್ರೀಕಾಂತ ಹಬೀಬ್, ವಿಠ್ಠಲ ಲದವಾ, ಪುಷ್ಪಾ ಪವಾರ, ವೀರು ಕಠಾರೆ, ಸುಭಾಷ್ ಭಾಂಡಗೆ ಭಾರತಿ ಇರಕಲ್ ಉಪಸ್ಥಿತರಿದ್ದರು.