ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಬೇಕೆಂದು ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ವಿಜಯಾನಂದ ಎಸ್.ಕಾಶಪ್ಪನವರು ಹುನಗುಂದ ನಿವಾಸದಲ್ಲಿ ಹೇಳಿದರು.
ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ಕೊಟ್ಟು ಪ್ರಚಾರದ ತಂತ್ರಗಾರಿಕೆಯ ಕುರಿತು ಮಾತನಾಡಿದರು. ಸಚಿವರನ್ನು ಪತ್ರಕರ್ತರು ಕೇಳಲಾದ ಪ್ರಶ್ನೆಗೆ ನಿಮ್ಮಲ್ಲಿ ಭಿನ್ನ ಮತ ಇದೆ ಅಲ್ಲವೇ? ಎಂದಿದ್ದಕ್ಕೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಶಾಸಕ ಕಾಶಪ್ಪನವರ ಸಹ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ವರಿಷ್ಠರು ಸೂಚಿಸಿದಂತೆ ಬಾಗಲಕೋಟೆ ಲೋಕಸಭಾ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರನ್ನು ಗೆಲ್ಲಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)