ಎರಡನೇ ಟೆಸ್ಟ್‌ನಲ್ಲಿ ಕುಲ್ದೀಪ್‌ ಯಾದವ್‌ ಆಡಬೇಕೆಂದ ಸಂಜಯ್ ಮಾಂಜ್ರೇಕರ್‌

ಚೆನ್ನೈ ಟೆಸ್ಟ್‌ನಲ್ಲಿ ಬೆಂಚ್‌ ಕಾದಿದ್ದ ಚೈನಾಮನ್‌ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರನ್ನು ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆಡಿಸಬೇಕೆಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಆಗ್ರಹಿಸಿದ್ದಾರೆ. ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಕುಲ್ದೀಪ್‌ ಯಾದವ್‌ಗೆ ಅವಕಾಶ ನೀಡಿರಲಿಲ್ಲ. ಇವರ ಬದಲಿಗೆ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಆರ್‌ ಅಶ್ವಿನ್‌ ಅವರನ್ನು ಆಡಿಸಲಾಗಿತ್ತು. ಅದರಂತೆ ಆರ್‌ ಅಶ್ವಿನ್‌ ಹಾಗೂ ರವೀಂದ್ರ ಜಡೇಜಾ ಇಬ್ಬರೂ ಆಲ್‌ರೌಂಡರ್‌ ಪ್ರದರ್ಶನದ ಮೂಲಕ ತಂಡವನ್ನು ಗೆಲ್ಲಿಸಿದರು. … Continue reading ಎರಡನೇ ಟೆಸ್ಟ್‌ನಲ್ಲಿ ಕುಲ್ದೀಪ್‌ ಯಾದವ್‌ ಆಡಬೇಕೆಂದ ಸಂಜಯ್ ಮಾಂಜ್ರೇಕರ್‌