ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 14 ನಿವೇಶನಗಳನ್ನು ಹಿಂತಿರುಗಿಸಿದರೂ ಕೂಡ ಮುಡಾ ವಿಚಾರ ಇನ್ನೂ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡುತ್ತಿದೆ. ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇದೇ ವೇಳೆ ತಮ್ಮ ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡಿದ್ದಾರೆ.
Non-veg Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲೇ ಮಾಡಿ ಆಂಧ್ರ ಸ್ಟೈಲ್ ಸ್ಪೆಷಲ್ ಚಿಕನ್ ಕರಿ!
ಸಿಎಂ ತಲೆ ಮೇಲೆ ನಾಗಮುದ್ರಿಕೆ ಇಟ್ಟು ಆಶೀರ್ವದಿಸಿದರು. ಇನ್ನು ಗರ್ಭಗುಡಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಾಷ್ಟಾಂಗ ನಮಸ್ಕಾರ ಹಾಕಿದರು. ಯಲ್ಲಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ವಿಶ್ವಾಸ ವೈದ್ಯರಿಂದ ಸಿಎಂ ಮತ್ತು ಡಿಸಿಎಂಗೆ ಹೂವಿನ ಹಾರ ಹಾಕಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಇನ್ನೂ ಸಿಎಂ ಸಿದ್ದರಾಮಯ್ಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆಯುವಾಗ ವೇತನ ಹೆಚ್ಚಿಸುವಂತೆ ದೇಗುಲದಲ್ಲೇ ಅರ್ಚಕರು ಮನವಿ ನೀಡಿದರು. ಈ ವೇಳೆ ಸಂಬಂಧಪಟ್ಟವರ ಜೊತೆಗೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.