ಬೆಂಗಳೂರು:- ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಕೊಡಿ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
ರಾಜ್ಯದೆಲ್ಲೆಡೆ ಮೂರು ಮತ್ತು ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಕ್ಕಿಲ್ಲ. ತಾಂತ್ರಿಕ ದೋಷದ ನೆಪಹೇಳಿ ಸರ್ಕಾರ ಕಳೆದೊಂದು ವರ್ಷದಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. ಬೆಂಗಳೂರಿನ ಬಿಎಂಸುಆರ್ಐ, ಅಟಲ್ ಬಿಹಾರಿ ವಾಜಪೇಯಿ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಸೇರಿ ಹಲವು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ.
ವಿದ್ಯಾರ್ಥಿ ವೇತನ ಬಿಡುಗಡೆ ಮಾಡದ ಸರ್ಕಾರ ಅತ್ತ ಖಾಲಿ ಹುದ್ದೆಗಳ ನೇಮಕಾತಿ ಕೂಡ ನಡೆಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನೇ ದಿನೇ ಕಳಪೆ ಆಹಾರಗಳ ಸೇವನೆ ಜನರ ಜೀವ ಹಿಂಡುತ್ತಿದೆ.
ಇಂತಹ ಹೊತ್ತಿನಲ್ಲಿ ಪ್ರಮುಖ ಪಾತ್ರ ವಹಿಸುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳು ಕೂಡ ಭರ್ತಿ ಆಗಿಲ್ಲ. ಸುಮಾರು 2692 ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಉದ್ಯೋಗಾಂಕ್ಷಿಗಳು ಫ್ರೀಡಂ ಪಾರ್ಕ್ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.