ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಸಮೀಪ ಶಾಲಾ ವಾಹನ ಚಲಿಸುತ್ತಿದ್ದಾಗ ಚಕ್ರಗಳು ಕಳಚಿದ ಘಟನೆ ನಡೆದಿದೆ. ಗುಂಡ್ಲುಪೇಟೆ ಪಟ್ಟಣದಲ್ಲಿರುವ ಹಿಂದೂಸ್ಥಾನ್ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ಇದಾಗಿದ್ದು, ನೇನೆಕಟ್ಟೆ, ಆಲತ್ತೂರು, ಮಳವಳ್ಳಿ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆ ತರುವಾಗ ಈ ಅವಘಡ ಉಂಟಾಗಿದೆ.
https://ainlivenews.com/here-is-the-interesting-information-you-need-to-know-about-the-union-budget/
ಮಕ್ಕಳನ್ನು ಶಾಲೆಗೆ ಕರೆತರುವಾಗ ಹಿಂಬದಿಯ ಎರಡೂ ಚಕ್ರಗಳು ಕಳಚಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೆ ವಿಷಯ ತಿಳಿದ ಮಾಡ್ರಳ್ಳಿ ಗ್ರಾಮಸ್ಥರು ಮಕ್ಕಳ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ.